ನಮ್ಮ ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ; ಪೇಜಾವರ ಶ್ರೀಗಳ ಹೇಳಿಕೆಗೆ ತೀವ್ರ ಆಕ್ಷೇಪ
ಸಿಎಂ ಸಿದ್ದರಾಮಯ್ಯ
ಬೆಂಗಳೂರು 27: ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದು, ಸಂವಿಧಾನ ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶ್ರೀಗಳ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಜಾರಿ ದಿನಾಚರಣೆಯಲ್ಲಿ ಮಾತನಾಡಿದ ಅವರು ಸಂವಿಧಾನದ ಬಗ್ಗೆ ಉಡುಪಿಯ ಪೇಜಾವರ ಸ್ವಾಮೀಜಿ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರು ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ. ಅವರು ಆ ಮನಸ್ಥಿತಿ ಇರುವವರು. ಮೇಲು-ಕೀಳು, ಮೇಲ್ಜಾತಿ-ಕೆಳಜಾತಿ ಎಂಬ ತಾರತಮ್ಯ ಸರಿ ಅಲ್ಲ. ಇಂತಹ ಅಲಿಖೀತ ಸಂವಿಧಾನವನ್ನು ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಇದನ್ನು ಪ್ರತಿಪಾದಿಸುವುದೇ ಮನುಸ್ಮತಿ. ಇದನ್ನು ಪ್ರಚುರಪಡಿಸುವವರೇ ಆರೆಸ್ಸೆಸ್ ಮತ್ತು ಬಿಜೆಪಿ ಎಂದಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 