ಗುರುವಿನ ಮಾರ್ಗದರ್ಶನ ಇದ್ದರೆ ನಮ್ಮ ಜೀವನ ಪಾವನ: ಸುಭಾಷ ಶೇವಾಳೆ ಮಹಾರಾಜರು
Our life is pure if we have the guidance of a Guru: Subhash Shewale Maharaj
ರಾಯಬಾಗ, 24 : ಗುರುವಿನ ಮಾರ್ಗದರ್ಶನ ಇದ್ದರೆ ನಮ್ಮ ಜೀವನ ಪಾವನಗೊಳ್ಳುತ್ತದೆ ಎಂದು ಅಥಣಿ ತಾಲೂಕಿನ ಮೊಳವಾಡದ ಸುಭಾಷ ಶೇವಾಳೆ ಮಹಾರಾಜರು ಹೇಳಿದರು. ಸೋಮವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಸೋಮವಾರ ಉಪವಾಸದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,
ಬ್ರಹ್ಮ, ವಿಷ್ಣು, ಮಹೇಶ್ವರ ಸಮನಾಗಿರುವ ಗುರುವಿನ ಸಾಮರ್ಥ್ಯ ಅರಿತು ನಡೆದವರ ಜೀವನ ನೆಮ್ಮದಿಯಿಂದ ಕೂಡಿರುತ್ತದೆ. ಅನುಭವದಿಂದ ಬರುವ ಜ್ಞಾನ, ಯಾವ ವಿದ್ಯೆಗೂ ಕಡಿಮೆ ಇಲ್ಲ ಎಂದು ಹೇಳಿದರು. ಸಾನ್ನಿಧ್ಯ ವಹಿಸಿ ಮಾತನಾಡಿದ ವೀರಭದ್ರ ಸ್ವಾಮಿಜೀಯವರು, ಸಾಧು, ಸಂತರ, ಮಹಾಪುರುಷರ ಜನ್ಮ ಭೂಮಿಯಾಗಿರುವ ಭಾರತ ದೇಶದಲ್ಲಿ ಜನಿಸಿರುವ ನಾವು ಪುಣ್ಯವಂತರು. ಇಂದಿನ ಯುವ ಪೀಳಿಗೆಗೆ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಧ್ಯಾನ ಮತ್ತು ಗುರು ಪರಂಪರೆ ಮಹತ್ವವನ್ನು ತಿಳಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ ನಂದಿಕುರಳಿ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 