ಗುರುವಿನ ಮಾರ್ಗದರ್ಶನ ಇದ್ದರೆ ನಮ್ಮ ಜೀವನ ಪಾವನ: ಸುಭಾಷ ಶೇವಾಳೆ ಮಹಾರಾಜರು
Our life is pure if we have the guidance of a Guru: Subhash Shewale Maharaj
ರಾಯಬಾಗ, 24 : ಗುರುವಿನ ಮಾರ್ಗದರ್ಶನ ಇದ್ದರೆ ನಮ್ಮ ಜೀವನ ಪಾವನಗೊಳ್ಳುತ್ತದೆ ಎಂದು ಅಥಣಿ ತಾಲೂಕಿನ ಮೊಳವಾಡದ ಸುಭಾಷ ಶೇವಾಳೆ ಮಹಾರಾಜರು ಹೇಳಿದರು. ಸೋಮವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಸೋಮವಾರ ಉಪವಾಸದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,
ಬ್ರಹ್ಮ, ವಿಷ್ಣು, ಮಹೇಶ್ವರ ಸಮನಾಗಿರುವ ಗುರುವಿನ ಸಾಮರ್ಥ್ಯ ಅರಿತು ನಡೆದವರ ಜೀವನ ನೆಮ್ಮದಿಯಿಂದ ಕೂಡಿರುತ್ತದೆ. ಅನುಭವದಿಂದ ಬರುವ ಜ್ಞಾನ, ಯಾವ ವಿದ್ಯೆಗೂ ಕಡಿಮೆ ಇಲ್ಲ ಎಂದು ಹೇಳಿದರು. ಸಾನ್ನಿಧ್ಯ ವಹಿಸಿ ಮಾತನಾಡಿದ ವೀರಭದ್ರ ಸ್ವಾಮಿಜೀಯವರು, ಸಾಧು, ಸಂತರ, ಮಹಾಪುರುಷರ ಜನ್ಮ ಭೂಮಿಯಾಗಿರುವ ಭಾರತ ದೇಶದಲ್ಲಿ ಜನಿಸಿರುವ ನಾವು ಪುಣ್ಯವಂತರು. ಇಂದಿನ ಯುವ ಪೀಳಿಗೆಗೆ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಧ್ಯಾನ ಮತ್ತು ಗುರು ಪರಂಪರೆ ಮಹತ್ವವನ್ನು ತಿಳಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ ನಂದಿಕುರಳಿ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 