ಸಾವಿರಕ್ಕೂ ಹೆಚ್ಚು ಮಕ್ಕಳಿಂದ ಅಮ್ಮನಿಗಾಗಿ ಒಂದು ಗಿಡ ಕಾರ್ಯಕ್ರಮದಲ್ಲಿ ಭಾಗಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ

ಸಾವಿರಕ್ಕೂ ಹೆಚ್ಚು ಮಕ್ಕಳಿಂದ ಅಮ್ಮನಿಗಾಗಿ ಒಂದು ಗಿಡ ಕಾರ್ಯಕ್ರಮದಲ್ಲಿ ಭಾಗಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ Over a thousand children participated in the One Plant for Mom program, says Finance Minister Nirmal

  ವಿಜಯನಗರ(ಹೊಸಪೇಟೆ) 05:  ಸಸಿ ನೆಡುವುದು ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು. ನಮ್ಮ ಸುತ್ತಮುತ್ತಲಿನ ವಾತಾವರಣ, ಪಶು-ಪಕ್ಷಿಗಳು ಮತ್ತು ಗಿಡಮರಗಳು ಸಮೃದ್ಧವಾಗಿದ್ದರೆ ಮಾತ್ರ ಮನುಕುಲದ ಪ್ರಗತಿ ಸಾಧ್ಯ. ಇಲ್ಲದಿದ್ದರೆ ಇಡೀ ಜೀವಸಂಕುಲವೇ ನಾಶವಾಗಿ ಇಡೀ ಭೂಮಿ ಮರುಭೂಮಿಯಾಗಲಿದೆ ಎಂದು ಕೇಂದ್ರ ಹಣಕಾಸು ಹಾಗೂ ಸಾಂಸ್ಥಿಕ ವ್ವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.