ಹಿರಿಯ ನಾಗರಿಕರಿಗೆ ಪಿಎಂ ಮೋದಿ ಆರೋಗ್ಯದ ಪಾಠ.
ನವದೆಹಲಿ, ಏ 25, ದೇಶದಲ್ಲಿ ಕರೋನ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಶನಿವಾರ ಬೆಳಗಿನ ಮಾಹಿತಿಯಂತೆ ಸೋಂಕಿತರ ಸಂಖ್ಯೆ 24, 506 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 800 ಗಡಿ ಸಮೀಪಿಸುತ್ತಿದೆ . ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಹಿರಿಯ ನಾಗರಿಕರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ಕಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರಬೇಕು ಎಂದು ಮನವಿ ಮಾಡುವುದನ್ನು ಮುಂದುವರೆಸಿದ್ದಾರೆ. ಇಂದು ಕೆಲವು ಹಿರಿಯ ನಾಗರಿಕರಿಗೆ ಕರೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರಬೇಕು ಎಂದೂ ಅವರು ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ. ಅವರು ಒಂದು ದಿನದ ಹಿಂದೆ ಕರ್ನಾಟಕದ ಡಿ.ಎಚ್ ಶಂಕರಮೂರ್ತಿ ಅವರಿಗೂ ಕರೆ ಮಾಡಿ ಆರೋಗ್ಯದ ಯೋಗಕ್ಷೇಮ ವಿಚಾರಿಸಿದ್ದರು.ಕರೋನ ಸೋಂಕು ಹೆಚ್ಚಾಗಿ ಹಿರಿಯರನ್ನು ಭಾಧಿಸುವ ಕಾರಣ ಬಹಳ ಕಾಳಜಿ ವಹಿಸಿ, ಮನೆಯರಿಗೂ ಹಿರಿಯರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದಾರೆ ಎನ್ನಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 