ಕೇಂದ್ರ ಬಜೆಟ್ ಗೆ ಜನರ ಸಲಹೆ ಆಹ್ವಾನಿಸಿರುವ ಪ್ರಧಾನಿ ಮೋದಿ
ನವದೆಹಲಿ, ಜ 8,2020-21 ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಕುರಿತು ತಮ್ಮ ಸಲಹೆ, ಕಲ್ಪನೆಗಳನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೇಶದ ಜನರಿಗೆ ಆಹ್ವಾನ ನೀಡಿದ್ದಾರೆ.ಕೇಂದ್ರ ಬಜೆಟ್ 130 ಕೋಟಿ ಭಾರತೀಯರ ಆಕಾಕ್ಷೆಗಳ ಪ್ರತೀಕವಾಗಿದ್ದು, ದೇಶವನ್ನು ಅಭಿವೃದ್ದಿಯತ್ತ ಮುನ್ನಡೆಸುವ ಹಾದಿಯನ್ನು ಅಯವ್ಯಯ ನಿರ್ಮಿಸಲಿದೆ. ಹಾಗಾಗಿ ಈ ವರ್ಷದ ಬಜೆಟ್ ಕುರಿತಂತೆ ಸಲಹೆ ಹಾಗೂ ಕಲ್ಪನೆಗಳನ್ನು ಮೈ ಗೌ ಡಾಟ್ ವೇದಿಕೆಯಲ್ಲಿ ಹಂಚಿಕೊಳ್ಳುವಂತೆ ಪ್ರಧಾನಿ ಟ್ವೀಟ್ ನಲ್ಲಿ ಆಹ್ವಾನ ನೀಡಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವಾಲಯ ಬಜೆಟ್ ಸಂಬಂಧ ದೇಶದ ಜನರಿಂದ ಸಲಹೆಗಳನ್ನು ಆಹ್ವಾನಿಸಿತ್ತು.ಮುಂಬರಲಿರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವ 2020-21 ನೇ ಸಾಲಿನ ಕೇಂದ್ರ ಬಜೆಟ್ ಗಾಗಿ ಹಣಕಾಸು ಸಚಿವಾಯಲಯ ದೇಶದ ಜನರ ಸಲಹೆಗಳನ್ನು ಎದುರು ನೋಡುತ್ತಿದೆ. ರೈತರು, ಶಿಕ್ಷಣ ಹಾಗೂ ಇನ್ನಿತರ ವಲಯಗಳಲ್ಲಿ ತಮ್ಮ ಆಮೂಲ್ಯವಾದ ಕಲ್ಪನೆಗಳನ್ನು ಹಂಚಿಕೊಳ್ಳುವಂತೆ ಹಣಕಾಸು ಸಚಿವಾಲಯ ಆಹ್ವಾನ ನೀಡಿತ್ತು.ಕೇಂದ್ರ ಬಜೆಟ್ ಫೆ. 1 ರಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 