ಕೇಂದ್ರ ಬಜೆಟ್ ಗೆ ಜನರ ಸಲಹೆ ಆಹ್ವಾನಿಸಿರುವ ಪ್ರಧಾನಿ ಮೋದಿ
ನವದೆಹಲಿ, ಜ 8,2020-21 ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಕುರಿತು ತಮ್ಮ ಸಲಹೆ, ಕಲ್ಪನೆಗಳನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೇಶದ ಜನರಿಗೆ ಆಹ್ವಾನ ನೀಡಿದ್ದಾರೆ.ಕೇಂದ್ರ ಬಜೆಟ್ 130 ಕೋಟಿ ಭಾರತೀಯರ ಆಕಾಕ್ಷೆಗಳ ಪ್ರತೀಕವಾಗಿದ್ದು, ದೇಶವನ್ನು ಅಭಿವೃದ್ದಿಯತ್ತ ಮುನ್ನಡೆಸುವ ಹಾದಿಯನ್ನು ಅಯವ್ಯಯ ನಿರ್ಮಿಸಲಿದೆ. ಹಾಗಾಗಿ ಈ ವರ್ಷದ ಬಜೆಟ್ ಕುರಿತಂತೆ ಸಲಹೆ ಹಾಗೂ ಕಲ್ಪನೆಗಳನ್ನು ಮೈ ಗೌ ಡಾಟ್ ವೇದಿಕೆಯಲ್ಲಿ ಹಂಚಿಕೊಳ್ಳುವಂತೆ ಪ್ರಧಾನಿ ಟ್ವೀಟ್ ನಲ್ಲಿ ಆಹ್ವಾನ ನೀಡಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವಾಲಯ ಬಜೆಟ್ ಸಂಬಂಧ ದೇಶದ ಜನರಿಂದ ಸಲಹೆಗಳನ್ನು ಆಹ್ವಾನಿಸಿತ್ತು.ಮುಂಬರಲಿರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವ 2020-21 ನೇ ಸಾಲಿನ ಕೇಂದ್ರ ಬಜೆಟ್ ಗಾಗಿ ಹಣಕಾಸು ಸಚಿವಾಯಲಯ ದೇಶದ ಜನರ ಸಲಹೆಗಳನ್ನು ಎದುರು ನೋಡುತ್ತಿದೆ. ರೈತರು, ಶಿಕ್ಷಣ ಹಾಗೂ ಇನ್ನಿತರ ವಲಯಗಳಲ್ಲಿ ತಮ್ಮ ಆಮೂಲ್ಯವಾದ ಕಲ್ಪನೆಗಳನ್ನು ಹಂಚಿಕೊಳ್ಳುವಂತೆ ಹಣಕಾಸು ಸಚಿವಾಲಯ ಆಹ್ವಾನ ನೀಡಿತ್ತು.ಕೇಂದ್ರ ಬಜೆಟ್ ಫೆ. 1 ರಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 