ಮಾ 17 ರಂದು ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ
ನವದೆಹಲಿ, ಜ 29 : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಬರುವ ಮಾರ್ಚ್ 17ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಬಂಗಬಂಧು ಶೇಖ್ ಮುಜೀಬುರ್ರಹ್ಮಾನ್ ಜನ್ಮಶತಮಾನೋತ್ಸವಕ್ಕೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
ಉಭಯ ದೇಶಗಳ ನಡುವಿನ ಆತ್ಮೀಯ ದ್ವಿಪಕ್ಷೀಯ ಸಂಬಂಧವನ್ನು ಬಿಂಬಿಸುವುದು ಇದರ ಉದ್ದೇಶವಾಗಿದೆ ಕಾರ್ಯಕ್ರಮದ ಹಿಂದಿನ ದಿನವೇ ಢಾಕಾ ತಲುಪಲಿರುವ ಮೋದಿ, ಬಾಂಗ್ಲಾದೇಶದ ಸಂಸ್ಥಾಪಕ ಮುಜೀಬುರ್ರಹ್ಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ.
ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸಂಘರ್ಷ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭೇಟಿ ಕುತೂಹಲ ತೀವ್ರ ಕೆರಳಿಸಿದೆ. ಭಾರತದ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಅನುಮೋದನೆ ಪಡೆದ ನಂತರ ಬಾಂಗ್ಲಾದೇಶದ ಮೂವರು ಸಚಿವರು ಭಾರತ ಪ್ರವಾಸ ರದ್ದುಪಡಿಸಿದ್ದಾರೆ.
ಆದರೆ ಸಿಎಎ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಗಲ್ಫ್ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 