ಮೂರು ತಿಂಗಳ ಬಾಡಿಗೆ ವಿನಾಯ್ತಿ ಘೋಷಿಸಿ ಪಿಎಂ ಗೆ ದುಂಬಾಲು
ಬೆಂಗಳೂರು, ಏ 12, ಕರೋನ ಸಂಕಷ್ಟ ಹಿನ್ನಲೆಯಲ್ಲಿ ಬಡವರ ತೊಂದರೆ ನಿವಾರಿಸಲು ಸರ್ಕಾರ ಕಾಳಜಿ ತೋರಿ ನೇರವಾಗಿಯೇ ಪ್ರಧಾನಿ ನರೇಂದ್ರ ಮೋದಿಯವರೆ ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳ ಬಾಡಿಗೆ ವಿನಾಯ್ತಿ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಪಡಿಸಿದ್ದಾರೆ . ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಆಯಾ ಮುಖ್ಯಮಂತ್ರಿಗಳೇ ಸ್ವಯಂ ತೀರ್ಮಾನ ತೆಗೆದುಕೊಂಡು ಬಾಡಿಗೆದಾರರ ಹಿತ ಕಾಯುತ್ತಿದ್ದಾರೆ ನಿಮ್ಮಿಂದಲೂ ದೇಶದ ಜನತೆ ಇದನ್ನು ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂತಹ ವಿಷಮ ಸನ್ನಿವೇಶದಲ್ಲಿ ನೇರವಾಗಿಯೇ ಪ್ರಧಾನಿ ನರೇಂದ್ರ ಮೋದಿಯವರೆ ಇಡಿ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳ ಬಾಡಿಗೆ ವಿನಾಯ್ತಿಯನ್ನು ಘೋಷಣೆ ಮಾಡಬೇಕು ಎಂದರು. ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಣೆ ಮಾಡಿದೆ . ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನಿ ಕೂಡಲೇ ಘೋಷಿಸಬೇಕು ಎಂದೂ ಅವರು ಆಗ್ರಹಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 