ಮೂರು ತಿಂಗಳ ಬಾಡಿಗೆ ವಿನಾಯ್ತಿ ಘೋಷಿಸಿ ಪಿಎಂ ಗೆ ದುಂಬಾಲು
ಬೆಂಗಳೂರು, ಏ 12, ಕರೋನ ಸಂಕಷ್ಟ ಹಿನ್ನಲೆಯಲ್ಲಿ ಬಡವರ ತೊಂದರೆ ನಿವಾರಿಸಲು ಸರ್ಕಾರ ಕಾಳಜಿ ತೋರಿ ನೇರವಾಗಿಯೇ ಪ್ರಧಾನಿ ನರೇಂದ್ರ ಮೋದಿಯವರೆ ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳ ಬಾಡಿಗೆ ವಿನಾಯ್ತಿ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಪಡಿಸಿದ್ದಾರೆ . ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಆಯಾ ಮುಖ್ಯಮಂತ್ರಿಗಳೇ ಸ್ವಯಂ ತೀರ್ಮಾನ ತೆಗೆದುಕೊಂಡು ಬಾಡಿಗೆದಾರರ ಹಿತ ಕಾಯುತ್ತಿದ್ದಾರೆ ನಿಮ್ಮಿಂದಲೂ ದೇಶದ ಜನತೆ ಇದನ್ನು ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂತಹ ವಿಷಮ ಸನ್ನಿವೇಶದಲ್ಲಿ ನೇರವಾಗಿಯೇ ಪ್ರಧಾನಿ ನರೇಂದ್ರ ಮೋದಿಯವರೆ ಇಡಿ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳ ಬಾಡಿಗೆ ವಿನಾಯ್ತಿಯನ್ನು ಘೋಷಣೆ ಮಾಡಬೇಕು ಎಂದರು. ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಣೆ ಮಾಡಿದೆ . ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನಿ ಕೂಡಲೇ ಘೋಷಿಸಬೇಕು ಎಂದೂ ಅವರು ಆಗ್ರಹಪಡಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 