ಪಿಎಂಜೆಜೆಬಿವೈ: 2ಲಕ್ಷ ರೂ ಪರಿಹಾರ ಧನ ವಿತರಣೆ
PMJJBY: Rs 2 lakh compensation distributed
ಹುಕ್ಕೇರಿ 23: ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಕೆನರಾ ಬ್ಯಾಂಕ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆಯಡಿ 2ಲಕ್ಷ ರೂ ಪರಿಹಾರ ಧನ ವಿತರಿಸಲಾಯಿತು. ಹುನ್ನೂರ ಗ್ರಾಮದ ರಾಯವ್ವಾ ಬಣಕಾರ ಅವರು ಉಳಿತಾಯ ಖಾತೆಯಲ್ಲಿ ಪಿಎಂಜೆಜೆಬಿವೈ ಜೀವವಿಮೆ ಪಡೆದಿದ್ದರು. ಅವರ ಅಕಾಲಿಕ ಮರಣದ ತರುವಾಯ ಫಲಾನುಭವಿ ಮೃತರ ತಾಯಿ ಮಾಯವ್ವಾ ಬಾಳಪ್ಪಾ ಪಿಸುತ್ರಿ ಅವರಿಗೆ ಪರಿಹಾರ ವಿತರಿಸಲಾಯಿತು.
ನವೆಂಬರ 19ರಂದು 2ಲಕ್ಷ ರೂ ಪರಿಹಾರ ವಿತರಿಸಿದ ಶಾಖೆಯ ಹಿರಿಯ ವ್ಯವಸ್ಥಾಪಕ ರಾಜೀವ ಅಶೋಕ ಪಾಟೀಲ ಮಾತನಾಡಿ ಬ್ಯಾಂಕಿನ ನಿಯಮಾನುಸಾರ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕರು ಉಳಿತಾಯ ಖಾತೆ ತೆರೆದು ಬ್ಯಾಂಕಿನಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯುವಂತೆ ತಿಳಿಸಿದರು. ಭಾರತ ಸರಕಾರ ಜಾರಿಗೊಳಿಸಿರುವ ಸಾಮಾಜಿಕ ಭದ್ರತಾ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಭದ್ರತೆಯನ್ನು ಸುರಕ್ಷಿತ ಮಾಡಿಕೊಳ್ಳುವಂತೆ ಕರೆ ನೀಡಿದರು. ಬ್ಯಾಂಕಿನ ಅಧಿಕಾರಿಗಳಾದ ಮಂಜುನಾಥ ಬಾವಕರ, ಅಭಯ ಮೋಹಿತೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 