ಪಿಎಂಜೆಜೆಬಿವೈ: 2ಲಕ್ಷ ರೂ ಪರಿಹಾರ ಧನ ವಿತರಣೆ
PMJJBY: Rs 2 lakh compensation distributed
ಹುಕ್ಕೇರಿ 23: ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಕೆನರಾ ಬ್ಯಾಂಕ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆಯಡಿ 2ಲಕ್ಷ ರೂ ಪರಿಹಾರ ಧನ ವಿತರಿಸಲಾಯಿತು. ಹುನ್ನೂರ ಗ್ರಾಮದ ರಾಯವ್ವಾ ಬಣಕಾರ ಅವರು ಉಳಿತಾಯ ಖಾತೆಯಲ್ಲಿ ಪಿಎಂಜೆಜೆಬಿವೈ ಜೀವವಿಮೆ ಪಡೆದಿದ್ದರು. ಅವರ ಅಕಾಲಿಕ ಮರಣದ ತರುವಾಯ ಫಲಾನುಭವಿ ಮೃತರ ತಾಯಿ ಮಾಯವ್ವಾ ಬಾಳಪ್ಪಾ ಪಿಸುತ್ರಿ ಅವರಿಗೆ ಪರಿಹಾರ ವಿತರಿಸಲಾಯಿತು.
ನವೆಂಬರ 19ರಂದು 2ಲಕ್ಷ ರೂ ಪರಿಹಾರ ವಿತರಿಸಿದ ಶಾಖೆಯ ಹಿರಿಯ ವ್ಯವಸ್ಥಾಪಕ ರಾಜೀವ ಅಶೋಕ ಪಾಟೀಲ ಮಾತನಾಡಿ ಬ್ಯಾಂಕಿನ ನಿಯಮಾನುಸಾರ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕರು ಉಳಿತಾಯ ಖಾತೆ ತೆರೆದು ಬ್ಯಾಂಕಿನಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯುವಂತೆ ತಿಳಿಸಿದರು. ಭಾರತ ಸರಕಾರ ಜಾರಿಗೊಳಿಸಿರುವ ಸಾಮಾಜಿಕ ಭದ್ರತಾ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಭದ್ರತೆಯನ್ನು ಸುರಕ್ಷಿತ ಮಾಡಿಕೊಳ್ಳುವಂತೆ ಕರೆ ನೀಡಿದರು. ಬ್ಯಾಂಕಿನ ಅಧಿಕಾರಿಗಳಾದ ಮಂಜುನಾಥ ಬಾವಕರ, ಅಭಯ ಮೋಹಿತೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 