ಪಿಎಂಜೆಜೆಬಿವೈ: 2ಲಕ್ಷ ರೂ ಪರಿಹಾರ ಧನ ವಿತರಣೆ
PMJJBY: Rs 2 lakh compensation distributed
ಹುಕ್ಕೇರಿ 23: ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಕೆನರಾ ಬ್ಯಾಂಕ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆಯಡಿ 2ಲಕ್ಷ ರೂ ಪರಿಹಾರ ಧನ ವಿತರಿಸಲಾಯಿತು. ಹುನ್ನೂರ ಗ್ರಾಮದ ರಾಯವ್ವಾ ಬಣಕಾರ ಅವರು ಉಳಿತಾಯ ಖಾತೆಯಲ್ಲಿ ಪಿಎಂಜೆಜೆಬಿವೈ ಜೀವವಿಮೆ ಪಡೆದಿದ್ದರು. ಅವರ ಅಕಾಲಿಕ ಮರಣದ ತರುವಾಯ ಫಲಾನುಭವಿ ಮೃತರ ತಾಯಿ ಮಾಯವ್ವಾ ಬಾಳಪ್ಪಾ ಪಿಸುತ್ರಿ ಅವರಿಗೆ ಪರಿಹಾರ ವಿತರಿಸಲಾಯಿತು.
ನವೆಂಬರ 19ರಂದು 2ಲಕ್ಷ ರೂ ಪರಿಹಾರ ವಿತರಿಸಿದ ಶಾಖೆಯ ಹಿರಿಯ ವ್ಯವಸ್ಥಾಪಕ ರಾಜೀವ ಅಶೋಕ ಪಾಟೀಲ ಮಾತನಾಡಿ ಬ್ಯಾಂಕಿನ ನಿಯಮಾನುಸಾರ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕರು ಉಳಿತಾಯ ಖಾತೆ ತೆರೆದು ಬ್ಯಾಂಕಿನಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯುವಂತೆ ತಿಳಿಸಿದರು. ಭಾರತ ಸರಕಾರ ಜಾರಿಗೊಳಿಸಿರುವ ಸಾಮಾಜಿಕ ಭದ್ರತಾ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಭದ್ರತೆಯನ್ನು ಸುರಕ್ಷಿತ ಮಾಡಿಕೊಳ್ಳುವಂತೆ ಕರೆ ನೀಡಿದರು. ಬ್ಯಾಂಕಿನ ಅಧಿಕಾರಿಗಳಾದ ಮಂಜುನಾಥ ಬಾವಕರ, ಅಭಯ ಮೋಹಿತೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 