ಇರಾನ್ ನಲ್ಲಿ ಸಿಲುಕಿರುವ ಭಾರತೀಯರ ವಾಪಸ್ಸು ಕರೆತರುವ ಪ್ರಕ್ರಿಯೆ ಆರಂಭ; ಸಚಿವ ಜೈಶಂಕರ
ನವದೆಹಲಿ, ಮಾ ೯, ಇರಾನ್ನಲ್ಲಿ ಸಿಲುಕಿರುವ ಭಾರತೀಯ ಯಾತ್ರಿಕರ ತಪಾಸಣೆ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಅವರನ್ನು ತಾಯ್ನಾಡಿಗೆ ಮರಳಿ ಕರೆತರಲು ಇರಾನ್ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಿರುವ ಮುಂದಿನ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ. ಕರೋನಾ ವೈರಸ್ ಸೋಂಕಿನಿಂದ ತೀವ್ರ ತೊಂದರೆಗೊಳಗಾಗಿರುವ ದೇಶಗಳಲ್ಲಿ ಇರಾನ್ ಕೂಡ ಸೇರಿದ್ದು, ಇರಾನ್ ನಲ್ಲಿರುವ ಭಾರತೀಯ ಮೀನುಗಾರರ ಪೈಕಿ ಯಾರೊಬ್ಬರಿಗೂ ಕರೋನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿಲ್ಲ ಎಂದು ಡಾ.ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕರೋನಾ ವೈರಸ್ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿರುವ ಭಾರತೀಯರಿಗೆ ಸೂಕ್ತ ವೈದ್ಯಕೀಯ ನೆರವು ಮತ್ತು ಸಾಮಾನ್ಯ ನೆರವು ಖಾತರಿ ಪಡಿಸಬೇಕು ಎಂದು ಟ್ವೀಟ್ ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಜೈಶಂಕರ್, ಇರಾನ್ನ ಕೋಮ್ ನಲ್ಲಿ ಸಿಲುಕಿರುವ ಭಾರತೀಯ ಯಾತ್ರಿಕರನ್ನು ತಾಯ್ನಾಡಿಗೆ ವಾಪಸ್ಸು ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಕರೋನಾ ವೈರಸ್ನಿಂದ ಹೊಸದಾಗಿ ೪೯ ಹೊಸದಾಗಿ ಮೃತಪಟ್ಟಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವಾಲಯ ನಿನ್ನೆ ಹೇಳಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 