ವನ್ಯ ಮೃಗಗಳ ಸಂರಕ್ಷಣಾ ಸಮಾವೇಶ
ಅಹಮದಾಬಾದ್, ಫೆ ೧೭,ಗುಜರಾತ್ನ ಗಾಂಧಿನಗರದಲ್ಲಿ ವಲಸೆ ವನ್ಯ ಮೃಗಗಳ ಸಂರಕ್ಷಣೆ ಕುರಿತ ೧೩ನೇ ಸಮಾವೇಶವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಲಿದ್ದಾರೆ.ಈ ತಿಂಗಳ ೨೨ ರವರೆಗೆ ನಡೆಯಲಿರುವ ಈ ಸಮಾವೇಶದಲ್ಲಿ ೧೩೦ ದೇಶಗಳ ಪ್ರತಿನಿಧಿಗಳು ಖ್ಯಾತ ಸಂರಕ್ಷಣಾಕಾರರು ಹಾಗೂ ವನ್ಯ ಮೃಗಗಳ ಸಂರಕ್ಷಣಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಅಂತಾರಾಷ್ಟ್ರೀಯ ಎನ್ಜಿಓ ಗಳು ಸಮಾವೇಶದಲ್ಲಿ ಭಾಗವಹಿಸುತ್ತಿದ್ದು, ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಘಟನೆಗಳು, ವನ್ಯ ಮೃಗ ಸಂರಕ್ಷಣೆಯ ಅತ್ಯುತ್ತಮ ವಿಧಾನಗಳನ್ನು ಪ್ರದರ್ಶಿಸಲಿದ್ದಾರೆ.ಆತಿಥೇಯ ರಾಷ್ಟ್ರ ಭಾರತ, ಮುಂದಿನ ಮೂರು ವರ್ಷಗಳ ಕಾಲ ಅಧ್ಯಕ್ಷ ಸ್ಥಾನಕ್ಕೆ ನಿಯೋಜನೆಯಾಗಲಿದೆ. ಭಾರತ ೧೯೮೩ ರಿಂದಲೂ ವಲಸೆ ವನ್ಯ ಮೃಗ ಸಂರಕ್ಷಣಾ ಸಮಾವೇಶಗಳಲ್ಲಿ ಭಾಗಿಯಾಗಿದೆ. ವಲಸೆ ಸಾಗರ ಜೀವಿಗಳ ಸಂರಕ್ಷಣೆಗಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 