ಬೈಕ್ ಸ್ಕೀಡ್ ಆಗಿ ಪ್ರಾಣಬಿಟ್ಟ ಪಿಎಸ್ ಐ
ಬೆಳಗಾವಿ,
ಏ.18, ಲಾಕ್ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ಐ ಓರ್ವರು
ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ಶನಿವಾರ
ನಡೆದಿದೆ.ಖಡೇಬಜಾರ್ ಪೊಲೀಸ್ ಠಾಣೆಯ ಮನೋಹರ್ ಗಣಾಚಾರಿ ಮೃತಪಟ್ಟ ಪಿಎಸ್ಐ.
ಯಳ್ಳೂರು ಗ್ರಾಮದಿಂದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್
ಬಂದೊಬಸ್ತ್ ಕರ್ತವ್ಯಕ್ಕಾಗಿ ಬರುತ್ತಿದ್ದಾಗ ಯಳ್ಳೂರು ಸಮೀಪದ ಕೆಎಲ್ ಇ ಆಸ್ಪತ್ರೆ
ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದೆ.
ಪ್ರಾಣಿಯನ್ನು ಉಳಿಸಲು ಹೋಗಿ ಸ್ಕಿಡ್ ಆಗಿ ಅವರು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ
ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ
ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಮನೋಹರ ಗಣಾಚಾರಿ ಅವರು, ಆರು ತಿಂಗಳ
ಹಿಂದಷ್ಟೇ ಬಡ್ತಿ ಹೊಂದಿ ಪಿಎಸ್ಐ ಆಗಿದ್ದರು. ಕಳೆದ ವರ್ಷ ಯಳ್ಳೂರಿನಲ್ಲಿ ಮನೆ
ಕಟ್ಟಿಸಿದ್ದು, ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು.
ಅಷ್ಟರಲ್ಲೇ ಈ ದುರಂತ ಸಂಭವಿಸಿದೆ.ಮೃತರು ಪತ್ನಿ, ಪುತ್ರ, ಮತ್ತು ತಂದೆ ಸೇರಿದಂತೆ ಅಪಾರ
ಬಂಧು ಬಳಗವನ್ನು ಅಗಲಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 