ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸ: ಸಚಿವ ಶ್ರೀರಾಮುಲು
ಬಳ್ಳಾರಿ20: ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ವಿಧಾನಸೌಧಲ್ಲಿ ಮಾತನಾಡಿದ ಅವರು, ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪಿಸ್ಥರು ಆದರೂ ಅವರಿಗೆ ತಕ್ಷಣ ಶಿಕ್ಷೆ ಕೊಡಬೇಕು. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಮರುಕಳಿಸದ ಹಾಗೆ ನೋಡಬೇಕು ಎಂದು ತಿಳಿಸಿದರು.
ಇನ್ನು ಆಶಾ ಕಾರ್ಯಕರ್ತರಿಗೆ ತೊಂದರೆಯಾಗುವುದನ್ನು ನಾವು ಸಹಿಸಲ್ಲ, ವೈದ್ಯಾಧಿಕಾರಿಗಳು ಅವರ ರಕ್ಷಣೆಗೆ, ಪ್ರಾಣ ಉಳಿಸಲು ಹೋಗಿದ್ದರು.
ಅವರ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ. ಈ ಕುರಿತು ಈಗಾಗಲೇ ಗೃಹ ಸಚಿವರ ಜತೆ ಚಚರ್ೆ ಮಾಡಿದ್ದೇನೆ. ಸಂಪುಟ ಸಭೆಯಲ್ಲೂ ಚಚರ್ೆ ನಡೆಸುತ್ತೇವೆ ಎಂದು ತಿಳಿಸಿದರು.
ರಾತ್ರಿ ವೇಳೆ ಅಧಿಕಾರಿಗಳು ಹೋಗ ಬಾರದಿತ್ತು ಎಂಬ ಜಮೀರ್ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕ್ವಾರಂಟೈನ್ನಲ್ಲಿ ಕೇರ್ ಮಾಡಬೇಕಾಗಿರುವುದು ಸಕರ್ಾರದ ಕರ್ತವ್ಯ. ಚಿಕಿತ್ಸೆ ಪ್ರಕ್ರಿಯೆಗಳನ್ನು ನಡೆಸಲು ನಮಗೆ ಯಾವುದೇ ಸಮಯ ಇರಲ್ಲ. ಕೊರೊನಾ ಚಿಕಿತ್ಸೆಗೆ ಯಾವುದೇ ಸಮಯ ನಿಗದಿ ಮಾಡಲು ಆಗುವುದಿಲ್ಲ. ಈ ಘಟನೆ ನಡೆದಿರುವುದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 