ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸ: ಸಚಿವ ಶ್ರೀರಾಮುಲು
ಬಳ್ಳಾರಿ20: ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ವಿಧಾನಸೌಧಲ್ಲಿ ಮಾತನಾಡಿದ ಅವರು, ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪಿಸ್ಥರು ಆದರೂ ಅವರಿಗೆ ತಕ್ಷಣ ಶಿಕ್ಷೆ ಕೊಡಬೇಕು. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಮರುಕಳಿಸದ ಹಾಗೆ ನೋಡಬೇಕು ಎಂದು ತಿಳಿಸಿದರು.
ಇನ್ನು ಆಶಾ ಕಾರ್ಯಕರ್ತರಿಗೆ ತೊಂದರೆಯಾಗುವುದನ್ನು ನಾವು ಸಹಿಸಲ್ಲ, ವೈದ್ಯಾಧಿಕಾರಿಗಳು ಅವರ ರಕ್ಷಣೆಗೆ, ಪ್ರಾಣ ಉಳಿಸಲು ಹೋಗಿದ್ದರು.
ಅವರ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ. ಈ ಕುರಿತು ಈಗಾಗಲೇ ಗೃಹ ಸಚಿವರ ಜತೆ ಚಚರ್ೆ ಮಾಡಿದ್ದೇನೆ. ಸಂಪುಟ ಸಭೆಯಲ್ಲೂ ಚಚರ್ೆ ನಡೆಸುತ್ತೇವೆ ಎಂದು ತಿಳಿಸಿದರು.
ರಾತ್ರಿ ವೇಳೆ ಅಧಿಕಾರಿಗಳು ಹೋಗ ಬಾರದಿತ್ತು ಎಂಬ ಜಮೀರ್ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕ್ವಾರಂಟೈನ್ನಲ್ಲಿ ಕೇರ್ ಮಾಡಬೇಕಾಗಿರುವುದು ಸಕರ್ಾರದ ಕರ್ತವ್ಯ. ಚಿಕಿತ್ಸೆ ಪ್ರಕ್ರಿಯೆಗಳನ್ನು ನಡೆಸಲು ನಮಗೆ ಯಾವುದೇ ಸಮಯ ಇರಲ್ಲ. ಕೊರೊನಾ ಚಿಕಿತ್ಸೆಗೆ ಯಾವುದೇ ಸಮಯ ನಿಗದಿ ಮಾಡಲು ಆಗುವುದಿಲ್ಲ. ಈ ಘಟನೆ ನಡೆದಿರುವುದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 