ಮಳೆಗಾಗಿ ಪಾದಯಾತ್ರೆ: ಗಂಗಾಜಲ ತಂದು ಗ್ರಾಮದ ದೇವರಿಗೆ ಜಲಾಭಿಷೇಕ
Padayatra for rain: Bringing Ganga water to perform *Jalabhisheka* for the village deity
ಹೂವಿನಹಡಗಲಿ 18: ತಾಲೂಕಿನ ಹೊಳಗುಂದಿ ಗ್ರಾಮದ ರೈತರು ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು. ಸುಮಾರು 10 ಮಂದಿ ರೈತರು ಪಾದಯಾತ್ರೆ ಮೂಲಕ ಬೆಟ್ಟದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಪಾತಾಳ ಗಂಗೆಯಿಂದ ಬಿಂದಿಗೆಯಲ್ಲಿ ಪವಿತ್ರ ಜಲ ತಂದು ಗ್ರಾಮದ ಕರಿಗಲ್ಲು ದೇವರಿಗೆ ಜಲಾಭಿಷೇಕ ನೆರವೇರಿಸಿ ಭಕ್ತಿಭಾವ ಮೆರೆದರು.
ಕಳೆದ ಒಂದು ತಿಂಗಳಿನಿಂದ ತಾಲೂಕಿನಲ್ಲಿ ಸಮರ್ಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಹಂತ ತಲುಪಿವೆ. ತೀವ್ರ ಬಿಸಿಲಿನಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಉತ್ತಮ ಮಳೆಯಾಗಲೆಂದು ವಿವಿಧ ರೀತಿಯ ಧಾರ್ಮಿಕ ಆಚರಣೆಗಳು ಮತ್ತು ಪ್ರಾರ್ಥನೆಗಳನ್ನು ಕೈಗೊಂಡಿದ್ದಾರೆ.
ಗ್ರಾಮದಲ್ಲಿ ಶಿವನಾಮ ಸಂಕೀರ್ತನೆ, ಭಜನೆ, ಮಹಿಳೆಯರಿಂದ ಗುಗ್ಗರಿ ಸೇವೆ ಹಾಗೂ ಹಾಲುಸ್ವಾಮಿ ಪಲ್ಲಕ್ಕಿ ಉತ್ಸವ ಸೇರಿದಂತೆ ಹಲವು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು. ಆದರೂ ಮಳೆ ಸುರಿಯದ ಹಿನ್ನೆಲೆಯಲ್ಲಿ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್. ಗುರುಸಿದ್ದಪ್ಪ, ಬಿ. ಪರಮೇಶಪ್ಪ, ಫಕ್ಕೀರ್ಪ ಕೆ., ಸ್ವರೂಪಾನಂದ, ಹೆಚ್. ನಾಗರಾಜ, ಡಿ.ವಿ. ನಾಗಪ್ಪ, ಹೆಚ್. ಸಿದ್ದಪ್ಪ, ಹೆಚ್.ಎಂ. ಮಲ್ಲಿಕಾರ್ಜುನಯ್ಯ, ಬಿ.ಎಂ. ವೀರೇಶ್, ಕೆ. ಕೊಟ್ರೇಶ್ ಸೇರಿದಂತೆ ಭಜನಾ ಸಂಘದ ಸದಸ್ಯರು ಹಾಗೂ ಯುವ ರೈತರು ಭಾಗವಹಿಸಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 