ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡನೀಯ: ನಮಾಜಕಟ್ಟಿ
Pahalgam terrorist attack condemnable: Namazkatti
ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡನೀಯ: ನಮಾಜಕಟ್ಟಿ
ತಾಳಿಕೋಟಿ 24: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಸಂಭವಿಸಿದ ಭಯಾನಕ ದುರಂತವನ್ನು ಜಮಾತೆ ಇಸ್ಲಾಮಿ ಹಿಂದ್ ನಗರ ಶಾಖೆಯ ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಕಟುವಾಗಿ ಖಂಡಿಸಿದ್ದಾರೆ.
ಘಟನೆ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಈ ಘಟನೆಯಲ್ಲಿ ಮಡಿದ ಅಮಾಯಕ ಹಾಗೂ ನಿರಪರಾಧಿಗಳ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತ ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿ ಹಾಗೂ ಸಾಮರ್ಥ್ಯವನ್ನು ದೇವನು ದಯಪಾಲಿಸಲಿ ಎಂದು ಹೇಳಿ ಸರ್ಕಾರವು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ಮತ್ತು ಸಹಾಯವನ್ನು ಒದಗಿಸಬೇಕು, ಜೊತೆಗೆ ಈ ಹೇಯ ಹಾಗೂ ಅಮಾನವೀಯ ಕೃತ್ಯ ಎಸಗಿದ ಮಾನವ ವಿರೋಧಿ ಶಕ್ತಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಭದ್ರತಾ ಪಡೆಯಿಂದ ಸಂಭವಿಸಿದ ವೈಫಲ್ಯ ಹಾಗೂ ನಿರ್ಲಕ್ಷದ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಾಳ್ಮೆ ಹಾಗೂ ಸಯಂಮ ಕಾಪಾಡುತ್ತಾ ಶಾಂತಿ ಮತ್ತು ಸಾಮರ್ಥ್ಯವನ್ನು ಸ್ಥಾಪಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ಅವರು ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 