ಗಡಿಯೊಳಕ್ಕೆ ಒಳನುಸುಳಲು ಪಾಕ್ ಹತಾಶ ಯತ್ನ
ನವದೆಹಲಿ,ಅ 19: ಭಾರತದ ಗಡಿಯೊಳಕ್ಕೆ ನುಸುಳಲು ಮಾರ್ಗ ಯೋಜನೆ ಸಿದ್ದಪಡಿಸುವಂತೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಭೂಗತ ಕಾರ್ಮಿಕರಿಗೆ ಸೂಚನೆ ನೀಡಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ವಾಪಸ್ ಪಡೆದ ನಂತರ ಪಾಕಿಸ್ತಾನ ದಿನ ಕ್ಯಾತೆ ತೆಗೆಯುತ್ತಿದ್ದು, ತನ್ನೆಲ್ಲಾ ಪ್ರಯತ್ನಗಳು ವಿಫಲವಾದ ಕಾರಣದಿಂದ ಇದೀಗ ಈ ಹತಾಶೆ ಮನೋಭಾವನೆಯಿಂದ ಈ ತಂತ್ರ ರೂಪಿಸಲು ಮುಂದಾಗಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯಿಂದಲೇ ಗೊತ್ತಾಗಿದೆ. ಚಳಿಗಾಲದಲ್ಲಿ ಉಗ್ರರು ಭಾರತದ ಒಳನುಸುಳುವಿಕೆಯ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಹಿಮಮಳೆ ಸುರಿಯುವುದಿರಂದ ಭಾರತದ ಒಳಗಡೆ ನುಸುಳಲು ಯತ್ನಿಸುತ್ತಾರೆ . ಹೀಗಾಗಿ ಐಎಸ್ಐ ಚಳಿಗಾಲಕ್ಕೂ ಮುನ್ನ ಹೊಸ ಮಾರ್ಗ ಯೋಜನೆಯನ್ನು ಸಿದ್ಧಪಡಿಸುವಂತೆ ಕಾಶ್ಮೀರದಲ್ಲಿರುವ ತನ್ನ ಭೂಗತ ಕಾರ್ಮಿಕರಿಗೆ ನಿರ್ದೇಶನ ನೀಡಿದೆ ಎಂದು ಹೇಳಲಾಗುತ್ತಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯ ಮೂಲಗಳಿಂದ ಗೊತ್ತಾಗಿದೆ ಎಂದು ಹೇಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 