ಗಡಿಯೊಳಕ್ಕೆ ಒಳನುಸುಳಲು ಪಾಕ್ ಹತಾಶ ಯತ್ನ
ನವದೆಹಲಿ,ಅ 19: ಭಾರತದ ಗಡಿಯೊಳಕ್ಕೆ ನುಸುಳಲು ಮಾರ್ಗ ಯೋಜನೆ ಸಿದ್ದಪಡಿಸುವಂತೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಭೂಗತ ಕಾರ್ಮಿಕರಿಗೆ ಸೂಚನೆ ನೀಡಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ವಾಪಸ್ ಪಡೆದ ನಂತರ ಪಾಕಿಸ್ತಾನ ದಿನ ಕ್ಯಾತೆ ತೆಗೆಯುತ್ತಿದ್ದು, ತನ್ನೆಲ್ಲಾ ಪ್ರಯತ್ನಗಳು ವಿಫಲವಾದ ಕಾರಣದಿಂದ ಇದೀಗ ಈ ಹತಾಶೆ ಮನೋಭಾವನೆಯಿಂದ ಈ ತಂತ್ರ ರೂಪಿಸಲು ಮುಂದಾಗಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯಿಂದಲೇ ಗೊತ್ತಾಗಿದೆ. ಚಳಿಗಾಲದಲ್ಲಿ ಉಗ್ರರು ಭಾರತದ ಒಳನುಸುಳುವಿಕೆಯ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಹಿಮಮಳೆ ಸುರಿಯುವುದಿರಂದ ಭಾರತದ ಒಳಗಡೆ ನುಸುಳಲು ಯತ್ನಿಸುತ್ತಾರೆ . ಹೀಗಾಗಿ ಐಎಸ್ಐ ಚಳಿಗಾಲಕ್ಕೂ ಮುನ್ನ ಹೊಸ ಮಾರ್ಗ ಯೋಜನೆಯನ್ನು ಸಿದ್ಧಪಡಿಸುವಂತೆ ಕಾಶ್ಮೀರದಲ್ಲಿರುವ ತನ್ನ ಭೂಗತ ಕಾರ್ಮಿಕರಿಗೆ ನಿರ್ದೇಶನ ನೀಡಿದೆ ಎಂದು ಹೇಳಲಾಗುತ್ತಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯ ಮೂಲಗಳಿಂದ ಗೊತ್ತಾಗಿದೆ ಎಂದು ಹೇಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 