ಕುಪ್ವಾರ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘನೆ
ಶ್ರೀನಗರ, ಏಪ್ರಿಲ್ 10,ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿನ ಕೆರನ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಪಡೆಗಳು ಶುಕ್ರವಾರ ಅಪ್ರಚೋದಿತ ಭಾರೀ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದೆ.2003 ರ ಕದನ ವಿರಾಮವನ್ನು ಉಲ್ಲಂಘಿಸಿರುವ ಪಾಕಿಸ್ತಾನಿ ಪಡೆಗಳು ಶುಕ್ರವಾರ ಮಧ್ಯಾಹ್ನ ಗಡಿಯ ಮುನ್ನೆಲೆ ಸೇನಾ ಶಿಬಿರಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಮೊರ್ಟರ್ ಶೆಲ್ಗಳನ್ನು ಹಾರಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಭಾರತೀಯ ಪಡೆಗಳು ಸಹ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದು, ಇತ್ತೀಚಿನ ವರದಿಗಳು ಬರುವವರೆಗೆ ಗುಂಡಿನ ಚಕಮಕಿ ಮುಂದುವರೆದಿತ್ತು. ಆದರೂ, ಭಾರತದ ಕಡೆ ಯಾವುದೇ ಆಸ್ತಿಗೆ ಹಾನಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ. ಈ ಮಧ್ಯೆ, ಪಾಕ್ ಪಡೆಗಳ ದಾಳಿಯಿಂದ ಗಡಿ ಪ್ರದೇಶ ಸಮೀಪವಿರುವ ಹಳ್ಳಿಗಳ ವಾಸಿಗಳು ಭೀತಿಗೊಂಡಿದ್ದಾರೆ. ಶೆಲ್ ದಾಳಿಗಳಿಂದ ತಪ್ಪಿಸಲು ಅನೇಕ ಸ್ಥಳೀಯರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 