ಭಾರತದ ಮೇಲೆ ಪ್ರತೀಕಾರಕ್ಕಾಗಿ ಪಾಕ್ ಉಗ್ರರ ದಾಳಿ: ಅಮೆರಿಕ ಶಂಕೆ
ವಾಷಿಂಗ್ಟನ್, ಅ 4: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರಕಾರ ರದ್ದುಪಡಿಸಿದ ಬಳಿಕ, ಪ್ರತೀಕಾರಕ್ಕಾಗಿ ಪಾಕ್ ಭಯೋತ್ಪಾದಕರು ಭಾರತದ ಮೇಲೆ ದಾಳಿ ನಡೆಸಬಹುದು ಎಂಬ ಶಂಕೆಯನ್ನು ಅಮೆರಿಕ ವ್ಯಕ್ತಪಡಿಸಿದೆ. ಕಾಶ್ಮೀರಕ್ಕೆ ಸಂಬಂಧಿಸಿದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಂಡ ಬಳಿಕ ಭಾರತದ ಮೇಲೆ ದಾಳಿ ನಡೆಸಬಹುದಾದ ಭಯೋತ್ಪಾದಕ ಸಂಘಟನೆಗಳನ್ನು ಪಾಕಿಸ್ತಾನ ನಿಯಂತ್ರಿಸಬೇಕು ಎಂದು ಹಲವು ದೇಶಗಳು ಒತ್ತಾಯಿಸಿವೆ. ಈ ರೀತಿಯ ಸಂಘರ್ಷವನ್ನು ಚೀನಾ ಬಯಸುತ್ತದೆ ಅಥವಾ ಅದಕ್ಕೆ ಬೆಂಬಲ ನೀಡುತ್ತಿದೆ ಎಂಬ ವಾದ ಸರಿಯಲ್ಲ ಎಂದು ಭಾರತ-ಪೆಸಿಫಿಕ್ ರಕ್ಷಣಾ ಸಹಾಯಕ ಕಾರ್ಯದರ್ಶಿ ರಾಂಡಾಲ್ ಶ್ರಿವರ್ ಹೇಳಿದ್ದಾರೆ. 370ನೇ ವಿಧಿಯನ್ನು ಭಾರತ ರದ್ದುಪಡಿಸಿದ ಬಳಿಕ, ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಚೀನಾ ನೀಡುತ್ತಿರುವ ಬೆಂಬಲ ಹೆಚ್ಚೆಂದರೆ ರಾಜತಾಂತ್ರಿಕ ಮತ್ತು ರಾಜಕೀಯ ಬೆಂಬಲವಾಗಿರಬಹದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 