ಶಿವಯೋಗಿಗಳ ಪಲ್ಲಕ್ಕಿ ಉತ್ಸವ
Palanki festival of Shivayogis
ಉಗರಗೋಳ 17: ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಕಾರ್ತೀಕ ಮಾಸದ ಸೋಮವಾರದ ಪ್ರಯುಕ್ತ, ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತು. ಗುರು ಶಿವಪ್ಪಯ್ಯ ಶಿವಯೋಗಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ, ಪೂಜೆ, ಮಹಾಮಂಗಳಾರತಿ ನೆರವೇರಿತು. ಮಠದಿಂದ ಹೂರಟ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಠ ತಲುಪಿತು. ಕರಡಿ ಮಜಲು ವೀರಭದ್ರ ವೀರಗಾಸೆ ಡೊಳ್ಳು ಕುಣಿತ, ಭಜನೆ, ಸುಮಂಗಲೆಯರ ಕುಂಭ ಮೇಳ ಗಮನ ಸೇಳೆದವು.
ಬೆಂಗಳೂರಿನ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಮಹೇಶ ಹಿರೇಮಠ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಬಸನಗೌಡ ಪಾಟೀಲ, ಶಿದ್ದನಗೌಡ ಗೂಡರಾಶಿ, ಗೀರೀಶ ಸತ್ತಿಗೇರಿ, ಸುನೀಲ ಬೆಳವಡಿ, ಜಗದನಗೌಡ ಗಂದಿಗವಾಡ, ವಿಜಯ ನರಗುಂದ, ಪರ್ಪ ಸರಾಫ, ಗೌಡಪ್ಪ ಗುಡೆನ್ನವರ, ಮಾದೇವ ಹಿರೇಹೊಳಿ, ಬಸುರಾಜ ಸಕಪ್ಪನವರ, ಮಾದೇವಪ್ಪ ಶಿದ್ದಾಪೂರ, ಶಿದ್ದಯ್ಯ ಶಿವಪ್ಪಯ್ಯನಮಠ ಹಾಗೂ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 