ಶಿವಯೋಗಿಗಳ ಪಲ್ಲಕ್ಕಿ ಉತ್ಸವ

 ಶಿವಯೋಗಿಗಳ ಪಲ್ಲಕ್ಕಿ ಉತ್ಸವ  Palanki festival of Shivayogis

               ಉಗರಗೋಳ  17:  ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಕಾರ್ತೀಕ ಮಾಸದ ಸೋಮವಾರದ ಪ್ರಯುಕ್ತ, ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತು. ಗುರು ಶಿವಪ್ಪಯ್ಯ ಶಿವಯೋಗಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ, ಪೂಜೆ, ಮಹಾಮಂಗಳಾರತಿ ನೆರವೇರಿತು. ಮಠದಿಂದ ಹೂರಟ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಠ ತಲುಪಿತು. ಕರಡಿ ಮಜಲು ವೀರಭದ್ರ ವೀರಗಾಸೆ ಡೊಳ್ಳು ಕುಣಿತ, ಭಜನೆ, ಸುಮಂಗಲೆಯರ ಕುಂಭ ಮೇಳ ಗಮನ ಸೇಳೆದವು. 

               ಬೆಂಗಳೂರಿನ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಮಹೇಶ ಹಿರೇಮಠ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಬಸನಗೌಡ ಪಾಟೀಲ, ಶಿದ್ದನಗೌಡ ಗೂಡರಾಶಿ, ಗೀರೀಶ ಸತ್ತಿಗೇರಿ, ಸುನೀಲ ಬೆಳವಡಿ, ಜಗದನಗೌಡ ಗಂದಿಗವಾಡ, ವಿಜಯ ನರಗುಂದ, ಪರ​‍್ಪ ಸರಾಫ, ಗೌಡಪ್ಪ ಗುಡೆನ್ನವರ, ಮಾದೇವ ಹಿರೇಹೊಳಿ, ಬಸುರಾಜ ಸಕಪ್ಪನವರ, ಮಾದೇವಪ್ಪ ಶಿದ್ದಾಪೂರ, ಶಿದ್ದಯ್ಯ ಶಿವಪ್ಪಯ್ಯನಮಠ ಹಾಗೂ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.