ನಂ.1 ರಾಜ್ಯವನ್ನಾಗಿಸಲು ಪಣ: ನಟಿ ತಾರಾ
ಗೋಕಾಕ: ಬಿಜೆಪಿ ಅಭ್ಯಥರ್ಿ ರಮೇಶ ಜಾರಕಿಹೊಳಿ ಅವರ ಪ್ರಚಾರಾರ್ಥವಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ಹಾಗೂ ಚಲನ ಚಿತ್ರ ನಟಿ ತಾರಾ ಅವರು ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿಗೆ ತೆರಳಿ ಮತಯಾಚನೆ ಮಾಡಿದರು.
ಮಂಗಳವಾರ ಮುಂಜಾನೆ ರಮೇಶ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ ತಾರಾ ಅವರು ನಂತರ ಗೋಕಾಕ ಮತಕ್ಷೇತ್ರದ ಕೊಳವಿ, ಗಿಳಿಹೊಸೂರ, ಖನಗಾಂವ ಸೇರಿದಂತೆ ಇತರ ಗ್ರಾಮಗಳಿಗೆ ತೆರಳಿ ಪಕ್ಷದ ಅಭ್ಯಥರ್ಿ ರಮೇಶ ಜಾರಕಿಹೊಳಿ ಅವರ ಪರವಾಗಿ ಮತಯಾಚನೆ ಮಾಡಿದರು.
ಗಿಳಿಹೊಸೂರ ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಶ್ರೀಮತಿ ತಾರಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕನರ್ಾಟಕ ರಾಜ್ಯವನ್ನು ನಂ 1 ರಾಜ್ಯವನ್ನಾಗಿಸಲು ಹೊರಟಿದ್ದಾರೆ. ಯಡಿಯೂರಪ್ಪ ಅವರ ಕೈ ಬಲ ಪಡಿಸಬೇಕೆಂದರೆ ಬಿಜೆಪಿ ಅಭ್ಯಥರ್ಿ ಶಾಸಕ ಎ.ಎಸ್ ಪಾಟೀಲ (ನಡಹಳ್ಳಿ) ಅವರು ಮಾತನಾಡಿದರು.
ಸಚಿವೆ ಶಶಿಕಲಾ ಜೋಲ್ಲೆ, ಶಾಸಕರಾದ ಆನಂದ ಮಾಮನಿ, ಮಹಾದೇವಪ್ಪಾ ಯಾದವಾಡ, ಮಾಜಿ ಶಾಸಕ ಡಾ.ವಿಶ್ವನಾಥ್ ಪಾಟೀಲ, ಜಿ.ಪಂ ಸದಸ್ಯ ಗೋವಿಂದ ಕೊಪ್ಪದ, ಶಶಿಧರ ದೇಮಶೆಟ್ಟಿ, ಮಹಾಂತೇಶ ತಾವಂಶಿ, ಶಾಮಾನಂದ ಪೂಜಾರಿ, ಶಕೀಲ ಧಾರವಾಡಕರ ಸೇರಿದಂತೆ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 