26 ರಿಂದ ಮೂರು ದಿನಗಳ ಕಾಲ ಪಾಂಡುರಂಗ ರುಕ್ಮಾಯಿ ದೇವರ ದಿಂಡಿ ಉತ್ಸವ

26 ರಿಂದ ಮೂರು ದಿನಗಳ ಕಾಲ ಪಾಂಡುರಂಗ ರುಕ್ಮಾಯಿ ದೇವರ ದಿಂಡಿ ಉತ್ಸವ  Pandurang Rukmai Devara Dindi Utsav for three days from 26th

ರಾಣಿಬೆನ್ನೂರ 26:  ಪಾಂಡುರಂಗ ರುಕ್ಮಾಯಿ ದೇವರ ದಿಂಡಿ ಉತ್ಸವವು ಎ 26 ರಿಂದ 28 ವರೆಗೆ ಮೂರು ದಿನಗಳ ಕಾಲ ದೇವರಗುಡ್ಡ ರಸ್ತೆಯ ಪಾಂಡುರಂಗ ರುಕ್ಮಾಯಿ ದೇವಸ್ಥಾನದಲ್ಲಿ ಜರುಗಲಿದೆ ಎಂದು ನಾಮದೇವ ಸಮಾಜದ ಅಧ್ಯಕ್ಷ ಪ್ರವೀಣ ಎಸ್ ಕೋಪರ್ಡೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.  ಎ26 ರಂದು ಸಂಜೆ 6-00 ಗಂಟೆಗೆ ಪೋತಿ ಸ್ಥಾಪನೆಯು ಕೃಷ್ಣಪ್ಪ ಕೋಪರ್ಡೆ ಹಾಗೂ ಸಂತ ಮಹೋದಯರಿಂದ ಜರುಗುವುದು. ಸಂಜೆ 7-30 ರಿಂದ 9-00 ರವರೆಗೆ ಭಜನೆ, ಕೀರ್ತನೆ ನಡೆಯುವುದು.  

ಎ27 ಸೋಮವಾರ ದಂದು ಬೆಳ್ಳಿಗ್ಗೆ 5-00 ಗಂಟೆಗೆ ಕಾಕಡಾರತಿ ಭಜನೆ, ಮತ್ತು 6-30 ರಿಂದ 9-00 ರವರೆಗೆ ಮಹಾ ಗಣಪತಿ, ಪಾಡುರಂಗ ರುಕ್ಮಾಯಿ ಹಾಗೂ ತುಳಜಾ ಭವಾನಿ ದೇವರಿಗೆ ಅಭಿಷೇಕ ಮತ್ತು ಪೂಜಾ ವಿಧಾನಗಳು ನಡೆಯುವವು. ನಂತರ ಸಂತರಿಂದ ಭಜನೆ ಕಾರ್ಯಕ್ರಮ ನಡೆಯುವುದು. ಅಂದು ಸಂಜೆ  6-00 ಗಂಟೆಯಿಂದ 8-00 ಗಂಟೆಯವರೆಗೆ ಕೀರ್ತನೆ ಕಾರ್ಯಕ್ರಮವನ್ನು ಪಂಡರಾಪುರದ ಯಶವಂತ ಪ್ರಭಾಕರ ಬುವಾ ಬೋದಲೆ ಮಹಾರಾಜರು ನಡೆಸಿಕೊಡುವರು ಈ ವೇಳೆ ಹೆಸರಾಂತ ಮೃದಂಗಕಾರರು, ಗಾಯಕರು, ಹಾಗೂ ಸಂತ ಮಹಾಂತರು ಆಗಮಿಸುವರು. 

ಎ.28 ಮಂಗಳವಾರ ದಂದು ಬೆಳ್ಳಿಗ್ಗೆ 8-30ಕ್ಕೆ ಪಾಂಡುರಂಗ ರುಕ್ಮಾಯಿ ಪಾಲಕಿ ಉತ್ಸವವು ನಗರದ ಪ್ರಮುಖ ರಾಜಬೀದಿಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಬಂದು ತಲುಪುವುದು.  ನಂತರ ಸಂತ ಪೂಜಾ, ಮಹಾ ಮಂಗಳಾರತಿ, ಸಂತರ ಕೀರ್ತನೆ ನಡೆಯಲಿದೆ. ಮಧ್ಯಾಹ್ನ 1-30 ಕ್ಕೆ ಅನ್ನ ಸಂತರೆ​‍್ಣ ಕಾರ್ಯಕ್ರಮವಿದ್ದು, ಸರ್ವ ಸಮಾಜದ ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋಪರ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.