ಶಿಂದಿಕುರಬೇಟ ಗ್ರಾಮದಲ್ಲಿ ಪಾಂಡುರಂಗ ಸಪ್ತಾಹ ಪ್ರಾರಂಭ
Pandurang Saptah begins in Shindikurabeta village
ಲೋಕದರ್ಶನ ವರದಿ
ಗೋಕಾಕ 29: ತಾಲೂಕಿನ ಶಿಂದಿಕುರಬೇಟ ಗ್ರಾಮದಲ್ಲಿ 21ನೇ ವರ್ಷದ ಅಂಗವಾಗಿ ಶ್ರೀ ಶ್ರೇಷ್ಠ ಜ್ಞಾನೇಶ್ವರಿ ಪಾರಾಯಣ ಅಖಂಡ ಹರಿನಾಮ ಸೋಹಳಾ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ಸಪ್ತಾಹವು ದಿ.29ರಿಂದ 31ರವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ.ದಿ.29 ಮತ್ತು 30ರಂದು ಮುಂಜಾನೆ ಕಾಕಡಾರತಿ ಹಾಗೂ ಪೋಥೀ ವಾಚನ, ರಾಮಜಪ,ಹರಿಪಾಠ,ಕೀರ್ತನ ಜರುಗಲಿದೆ.ದಿ.31ರಂದು ಮುಂಜಾನೆ ಕಾಕಡಾರತಿ ನಂತರ ಶ್ರೀ ಜ್ಞಾನೇಶ್ವರಿ ಪಾರಾಯಣ ಸಮಾಪ್ತಿ,ದಿಂಡಿ ಸೋಹಳಾ, ಸುಮಂಗಲೆಯರ ಆರತಿಯೊಂದಿಗೆ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿಯರ ಪಲ್ಲಕ್ಕಿ ಉತ್ಸವ ನಂತರ ಮಧ್ಯಾಹ್ನ ಮಹಾಪ್ರಸಾದ ಜರುಗಲಿದೆ. ಘಟಪ್ರಭಾದ ಮಾರುತಿ ವಂಜೇರಿ ಇವರು ಪಾರಾಯಣ ನಡೆಸಿಕೊಡುವರು.ಶ್ರೀ ಬಾಳು ಮಹಾರಾಜ ಭೋಸಲೆ ಮತ್ತು ಮಾಣಿಕ್ ಬೀಸೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಪ್ತಾಹ ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 