ಶಿಂದಿಕುರಬೇಟ ಗ್ರಾಮದಲ್ಲಿ ಪಾಂಡುರಂಗ ಸಪ್ತಾಹ ಪ್ರಾರಂಭ
Pandurang Saptah begins in Shindikurabeta village
ಲೋಕದರ್ಶನ ವರದಿ
ಗೋಕಾಕ 29: ತಾಲೂಕಿನ ಶಿಂದಿಕುರಬೇಟ ಗ್ರಾಮದಲ್ಲಿ 21ನೇ ವರ್ಷದ ಅಂಗವಾಗಿ ಶ್ರೀ ಶ್ರೇಷ್ಠ ಜ್ಞಾನೇಶ್ವರಿ ಪಾರಾಯಣ ಅಖಂಡ ಹರಿನಾಮ ಸೋಹಳಾ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ಸಪ್ತಾಹವು ದಿ.29ರಿಂದ 31ರವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ.ದಿ.29 ಮತ್ತು 30ರಂದು ಮುಂಜಾನೆ ಕಾಕಡಾರತಿ ಹಾಗೂ ಪೋಥೀ ವಾಚನ, ರಾಮಜಪ,ಹರಿಪಾಠ,ಕೀರ್ತನ ಜರುಗಲಿದೆ.ದಿ.31ರಂದು ಮುಂಜಾನೆ ಕಾಕಡಾರತಿ ನಂತರ ಶ್ರೀ ಜ್ಞಾನೇಶ್ವರಿ ಪಾರಾಯಣ ಸಮಾಪ್ತಿ,ದಿಂಡಿ ಸೋಹಳಾ, ಸುಮಂಗಲೆಯರ ಆರತಿಯೊಂದಿಗೆ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿಯರ ಪಲ್ಲಕ್ಕಿ ಉತ್ಸವ ನಂತರ ಮಧ್ಯಾಹ್ನ ಮಹಾಪ್ರಸಾದ ಜರುಗಲಿದೆ. ಘಟಪ್ರಭಾದ ಮಾರುತಿ ವಂಜೇರಿ ಇವರು ಪಾರಾಯಣ ನಡೆಸಿಕೊಡುವರು.ಶ್ರೀ ಬಾಳು ಮಹಾರಾಜ ಭೋಸಲೆ ಮತ್ತು ಮಾಣಿಕ್ ಬೀಸೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಪ್ತಾಹ ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 