ನಾಳೆಯಿಂದ ಪಾಂಡುರಂಗ ವಿಠ್ಠಲ ಪ್ರವಚನ
Panduranga Vitthala discourses starting tomorrow
ತಾಳಿಕೋಟಿ 19: ಆಷಾಢ ಏಕಾದಶಿ ನಿಮಿತ್ಯವಾಗಿ ಪಾಂಡುರಂಗ ವಿಠ್ಠಲ ಮಂದಿರ ಟ್ರಸ್ಟ್ ವತಿಯಿಂದ ಪಾಂಡುರಂಗ ವಿಠ್ಠಲ ಪ್ರವಚನ ಜುಲೈ 21 ರಿಂದ ಆರಂಭವಾಗಲಿದೆ. ಪ್ರತಿದಿನ ಸಾಯಂಕಾಲ 6 ರಿಂದ 7ಗಂಟೆಯವರೆಗೆ ವಿಠ್ಠಲ ಮಂದಿರದಲ್ಲಿ 25ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಈ ಪ್ರವಚನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜುಲೈ 21ರಂದು ಸಂಜೆ 6ಗಂಟೆಗೆ ನಡೆಯಲಿದ್ದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಉದ್ಘಾಟಿಸುವರು. ನಾಡಿನ ಖ್ಯಾತ ಪ್ರವಚನಕಾರ ಸಿದ್ದರಾಮ ಶಿವಯೋಗಿಗಳು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿರುವರು. ಪ್ರವಚನದ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಪಾಂಡುರಂಗ ವಿಠ್ಠಲ ಮಂದಿರ ಟ್ರಸ್ಟ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 