ದಲಿತ ಸಂಘರ್ಷ ಸಮಿತಿಯ ಗ್ರಾವ ಸಂಚಾಲಕರಾಗಿ ಪರಶುರಾಮ ಆಯ್ಕೆ
Parashuram elected as village coordinator of Dalit Sangharsh Samiti
ಕಂಪ್ಲಿ 20: ಪಟ್ಟಣದ ಅತಿಥಿ ಗೃಹದಲ್ಲಿ ಗುರುವಾರ ಸಂಜೆ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ)ಯ ತಾಲೂಕು ಸಂಚಾಲಕ ಹೆಚ್.ಗುಂಡಪ್ಪ ನೇತೃತ್ವದಲ್ಲಿ ಹಾಗೂ ತಾಲೂಕು ಸಂಘಟನಾ ಸಂಚಾಲಕ ಹೆಚ್.ಮರಿಯಪ್ಪ ಅವರ ಸಮ್ಮುಖದಲ್ಲಿ ಸಂಘಟನೆ ಸಭೆ ಹಾಗೂ ದೇವಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ದೇವಲಾಪುರ ಗ್ರಾಮ ಘಟಕದ ಸಂಚಾಲಕರಾಗಿ ಪರಶುರಾಮ, ಸಂಘಟನಾ ಸಂಚಾಲಕರಾಗಿ ಹೆಚ್.ತಿಪ್ಪೇಶ, ಶಿವರಾಜ, ಮಾರುತಿ, ಖಜಾಂಚಿಯಾಗಿ ಹೆಚ್.ಹನುಮಂತ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಾಜಾ, ಪರಶುರಾಮ, ಇಮಂತರಾಜ, ಹೆಚ್.ವಿನೋದ, ಅಶೋಕ, ಅಭಿಷೇಕ, ಯಲ್ಲಪ್ಪ, ದುರುಗೇಶ, ಉಮೇಶ, ಹಿರಿಯ ಸಲಹೆಗಾರರಾಗಿ ಹೆಚ್.ನಾಗರಾಜ, ವಿರೇಶ, ರವಿ ಆಯ್ಕೆಗೊಂಡರು. ನಂತರ ನೂತನ ಪದಾಧಿಕಾರಿಗಳಿಗೆ ಮಾಲಾರೆ್ಣಯೊಂದಿಗೆ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಹುಲುಗಪ್ಪ, ಲಕ್ಷ್ಮಣ ಸೇರಿದಂತೆ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 