ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ ಪ್ರಮುಖ : ಡಾ.ಜಿತೇಂದ್ರ
Parents' role is important in children's educational progress: Dr. Jitendra
ಕಾರಟಗಿ 24 : ಶುಭಂ ಕಿಡ್ಸ್ ಶಾಲೆಯ ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ಕಾರ್ಯಕ್ರಮ ಜರಗಿತು. ಈ ವೇಳೆ ಡಾ ಜಿತೇಂದ್ರ ಮಾತನಾಡಿ ಗ್ರಾಜುಯೇಷನ್ ಡೇಯುಕೆಜಿ ಮುಗಿಸಿ ಪ್ರಾಥಮಿಕ ಶಾಲೆಗೆ ಕಾಲಿಡುತ್ತಿರುವ ಪುಟಾಣಿಗಳ ಕಲಿಕೆಯ ಮೊದಲ ಮೈಲಿಗಲ್ಲನ್ನು ಆಚರಿಸುವ ವಿಶೇಷ ಸಮಾರಂಭವಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರಷ್ಟೇ ಪಾಲಕರ ಪಾತ್ರವೂ ಪ್ರಮುಖ. ಮನೆಯೇ ಮೊದಲ ಪಾಠಶಾಲೆ ಎಂದು ಬಾಯಿಮಾತಿನಿಂದ ಹೇಳದೆ ಪಾಲಕರು ಮನೆಯಲ್ಲಿ ಮಕ್ಕಳಿಗಾಗಿ ಆರೋಗ್ಯಕರ ವಾತಾವರಣ ನಿರ್ಮಿಸಬೇಕು ಎಂದು ತಂದೆ- ತಾಯಿ ಮಕ್ಕಳ ಮುಂದೆ ಧನಾತ್ಮಕ ವಿಚಾರಗಳನ್ನು ಮಾತ್ರ ಮಾತನಾಡಬೇಕು.
ಮಕ್ಕಳ ವ್ಯಕ್ತಿತ್ವ ನಿರ್ಮಾಣದ ಸಂಸ್ಕಾರ ಕೇಂದ್ರ ಕುಟುಂಬ. ಮಕ್ಕಳ ಜೆತೆ ಹೆಚ್ಚು ಸಮಯ ಕಳೆದು ಅವರನ್ನು ಸ್ನೇಹಿತರಂತೆ ಕಾಣಬೇಕು. ಮಕ್ಕಳಿಗೆ ಮೊಬೈಲ್ ನೀಡಬಾರದು. ಮುಖ್ಯವಾಗಿ ಮಕ್ಕಳ ಮುಂದೆ ಹೆಚ್ಚು ಹೊತ್ತು ಮೊಬೈಲ್ ಬಳಸಬಾರದು. ಮನೆಯಲ್ಲಿ ದೈಹಿಕವಾಗಿ ಶ್ರಮವಾಗುವಂತಹ ಕೆಲಸಗಳನ್ನು ನೀಡಬೇಕು ಎಂದರು.ನಂತರ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ನಂತರ ಮಕ್ಕಳಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು ಈ ವೇಳೆ ಪಾಲಕರು ಮಕ್ಕಳೊಂದಿಗೆ ಹೆಜ್ಜೆ ಹಾಕಿಸಂತೋಷ ಪಟ್ಟರು.ಈ ಸಂದರ್ಭದಲ್ಲಿ ಕೊಲ್ಲಾ ಶೇಷಗಿರಿರಾವ್ ಅಧ್ಯಕ್ಷರು, ಮುಖ್ಯೋಪಾಧ್ಯಾಯನಿ ಶ್ರೀದೇವಿ ಕೊಲ್ಲಾ, ಶಿಕ್ಷಕಿಯರು ಅರುಣ, ಸೌಮ್ಯ ಹಿರೇಮಠ,ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 