ಮಕ್ಕಳು ಶೈಕ್ಷಣಿಕಾವಗಿ ಪ್ರಗತಿ ಹೊಂದಬೇಕು ಎಂದರೆ ಶಿಕ್ಷಕರಂತೆ ಪಾಲಕರು ಜವಾಬ್ದಾರರು
Parents are as responsible as teachers for children to progress academically
ಆಲಮೇಲ 07: ಗ್ರಾಮೀಣ ಬಾಗದ ಬಡ ಜನರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು 30 ವರ್ಷಗಳ ಹಿಂದೆ ಆರಂಬಿಸಿ ಹೆಮ್ಮರವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶಿವುಕುಮಾರ ಗುಂದಗಿ ಹೇಳಿದರು. ಅವರು ಪಟ್ಟಣದ ಗ್ರಾಮೀಣ ಅಭಿವೃದ್ಧಿ ವಿದ್ಯಾವರ್ಧಕ ಸಂಸ್ಥೆಯ ಪ್ರಾಥಮಿಕ ಶಾಲೆಯ7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಬಾಗದ ಮಕ್ಕಳಿಗಾಗಿ ಆರಂಬಿಸಿದ ಈ ಸಂಸ್ಥೆ ಇಂದು ಪ್ರಾಥಮಿಕ ದಿಂದ ಪದವಿ ಮಹಾವಿದ್ಯಾಲಯದವರೆಗೆ ಒಂದೆ ಸಂಸ್ಥೆಯಲ್ಲಿ ಕಲಿಯುವಂತೆ ವ್ಯವಸ್ಥೆ ಮಾಡಲಾಗಿದೆ ಅದಕ್ಕೆ ಜನರ ಸಹಕಾರದಿಂದ ಈ ಮಟ್ಟಕ್ಕೆ ಬೆಳದಿದೆ ಎಂದು ಹೆಳಿದರು ಎಂದರು.
ಮಕ್ಕಳು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರೆ ಶಿಕ್ಷರಷ್ಟೆ ಪಾಲಕರ ಜವಾಬ್ದಾರಿ ಮಯಖ್ಯವಾಗಿದೆ ಎಂದು ಹೇಳಿದರು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೆತ ವಿದ್ಯಾರ್ಥಿಗಳಿಗರ ಪ್ರಶಸ್ತಿ ನೀಡಿ ಗೌರವಿಸಿ ಅಭಿನಂದಿಸಿದರು. ರಾಂಪೂರದ ನಿತ್ಯಾನಂದ ಮಹಾರಾಜರು ಸಾನಿದ್ಯ ವಹಿಸಿದ್ದರು. ಮುಖ್ಯ ಶಿಕ್ಷಕ ಜಿ.ಕೆ. ಅಂಬೂರೆ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್. ಪೂಜಾರ, ಕಾನಿಪ ಅಧ್ಯಕ್ಷ ಅವಧೂತ ಬಂಡಗಾರ, ಪಾಲಕ ಪ್ರತಿನಿದಿಗಳಾದ ಸೌದಾಗರ, ಮಾಡ್ಯಾಳ ಹಾಗೂ ಶಾಲೆಯ ಶಿಕ್ಷಕ ಸಿಬ್ಬಂದಿ ಇದ್ದರು. ಶಿಕ್ಷಕಿ ಕವಿತಾ ಪಶುಪತಿಮಠ ಸ್ವಾಗತಿಸಿದರು, ರೂಪಾ ಪಾಟೀಲ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 