ಡಿಸೇಲ್ ಸುರಿದು ಮಗನನ್ನೇ ಸಜೀವ ದಹನಗೊಳಿಸಿದ ಹೆತ್ತವರು
Parents burn their Son alive
ಜಮಖಂಡಿ 08: ತಾಲೂಕಿನ ಬಿದರಿ ಗ್ರಾಮದಲ್ಲಿ ಹೆತ್ತ ತಂದೆ, ತಾಯಿ ಹಾಗೂ ಸಹೋದರ ಬಿಎಸ್ಎಫ್ ಯೋಧ ಸೇರಿಕೊಂಡು ಡಿಸೇಲ್ ಸುರಿದು ಮಗನನ್ನೇ ಸಜೀವ ದಹನ ಮಾಡಿದ ಧಾರುಣ ಘಟನೆ ನಡೆದಿದೆ.
ಬಿದರಿ ಗ್ರಾಮದ ಅನೀಲ ಕಾನಟ್ಟಿ (32) ಸಜೀವ ದಹನದಲ್ಲಿ ಸಾವನ್ನಪ್ಪಿದ ದುರ್ದೈವಿ. ತಂದೆ ಪರ್ಪ, ತಾಯಿ ಶಾಂತಾ, ಸಹೋದರ ಬಸವರಾಜ ಮೂವರು ಸೇರಿಕೊಂಡು ಡಿಸೇಲ್ ಸುರಿದು ಸಜೀವ ದಹನ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.
ಬಿದರಿ ಗ್ರಾಮದ ಅನೀಲ ಕಾನಟ್ಟಿ (32) ಮದ್ಯ ವ್ಯಸನಿಯಾಗಿದ್ದು. ನಿತ್ಯವೂ ತಂದೆ-ತಾಯಿಯೊಂದಿಗೆ ಜಗಳವಾಡುತ್ತಿದ್ದು. ಆತನ ಕಿರುಕುಳ ತಾಳದೆ ಕುಟುಂಬಸ್ಥರು ಬೇಸತ್ತು ಹೋಗಿದ್ದರು. ಆತನು ಕುಡಿದು ಬಂದು ಜಗಳಕ್ಕಿಳಿದಾಗ ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಅನೀಲನ ಕೈ, ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ. ನಂತರ ಆತನ ಮೇಲೆ ಡಿಸೇಲ್ ಸುರಿದು ಸಜೀವವಾಗಿ ದಹಿಸಿದ್ದಾರೆ ಎಂದು ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಜಿಲ್ಲಾ ಎಸ್ಪಿ, ಸಿದ್ದಾರ್ಥ ಗೋಯಲ್, ಡಿಎಸ್ಪಿ, ರೋಷನ್ ಜಮೀರ ಸೈಯದ ಅವರ ಮಾರ್ಗದರ್ಶನದಲ್ಲಿ ಸಿಪಿಐ, ಮಲ್ಲಪ್ಪ ಮಡ್ಡಿ, ಸಾವಳಗಿ ಪಿಎಸ್ಐ, ಅಪ್ಪು ಐಗಳಿ ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 