ಪುತ್ರ ನಿರ್ಲಕ್ಷ್ಯ ಮಾಡಿದ್ರೆ ಹೆತ್ತವರು ಆಸ್ತಿ ವಾಪಸ್ ಕೇಳ್ಬೋದು: ಬಾಂಬೆ ಹೈಕೋರ್ಟ್
ಮುಂಬಯಿ: ಒಂದೊಮ್ಮೆ ಮಗ ಚೆನ್ನಾಗಿ ನೋಡಿಕೊಳ್ಳದಿದ್ದರೆ, ದೌರ್ಜನ್ಯ ನಡೆಸಿದರೆ, ಕ್ರೂರವಾಗಿ ನಡೆಸಿಕೊಂಡರೆ ತಂದೆ-ತಾಯಿ ತಾವು ಆತನಿಗೆ ನೀಡಿದ ಆಸ್ತಿಯನ್ನು ವಾಪಸ್ ಪಡೆದುಕೊಳ್ಳಬಹುದು- ಇದು ಬಾಂಬೆ ಹೈಕೋರ್ಟ್ ನೀಡಿದ ಮಹತ್ವದ ತೀರ್ಪು.
ಹಿರಿಯ ನಾಗರಿಕರ ಪಾಲನೆ ಪೋಷಣೆಗೆ ಸಂಬಂಧಿಸಿದ ವಿಶೇಷ ಕಾನೂನನ್ನು ಉಲ್ಲೇಖಿಸಿರುವ ಕೋರ್ಟ್, ಮಗನಿಗೆ ನೀಡಿದ ಆಸ್ತಿಯನ್ನು ಮರಳಿ ಪಡೆಯುವ ಹಿರಿಯರ ಹಕ್ಕನ್ನು ಎತ್ತಿ ಹಿಡಿದಿದೆ. ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಮತ್ತು ಅನುಜಾ ಪ್ರಭು ದೇಸಾಯಿ ಅವರನ್ನೊಳಗೊಂಡ ವಿಭಾಗೀಯ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯುತ್ತಾ ಈ ಸಂದೇಶ ನೀಡಿದೆ.
* ಯಾವ ಪ್ರಕರಣವಿದು?
ಅಂಧೇರಿಯ ವ್ಯಕ್ತಿಯೊಬ್ಬರ ಪತ್ನಿ 2014ರಲ್ಲಿ ಮೃತಪಟ್ಟಿದ್ದರು. ಆಗ ಮಗ ಮತ್ತು ಸೊಸೆ ಫ್ಲ್ಯಾಟ್ನ ಅರ್ಧ ಭಾಗವನ್ನು ತಮಗೆ ನೀಡಬೇಕೆಂದು ಕೇಳಿದ್ದರು. ಅಂತೆಯೇ ಅವರಿಗೆ ಬರೆದುಕೊಡಲಾಯಿತು. ಕಳೆದ ವರ್ಷ ಈ ವ್ಯಕ್ತಿ ಮರುಮದುವೆಯಾಗಿದ್ದು, ಮಗ ಮತ್ತು ಸೊಸೆ ಎರಡನೇ ಪತ್ನಿಯನ್ನು ನಿರ್ಲಕ್ಷಿಸಲು ಆರಂಭಿಸಿದರು. ಇದರಿಂದ ಸಿಟ್ಟಿಗೆದ್ದ ಅವರು ತಾನು ಮಗನಿಗೆ ಕೊಟ್ಟ ಪಾಲನ್ನು ವಾಪಸ್ ಪಡೆಯಲು ಮುಂದಾಗಿ ಕೋರ್ಟ್ ಮೊರೆ ಹೊಕ್ಕರು. ಕೆಳ ನ್ಯಾಯಾಲಯ ಅವರ ಪರವಾಗಿ ತೀರ್ಪು ನೀಡಿದಾಗ ಮಗ ಹೈಕೋರ್ಟ್ ಮೆಟ್ಟಿಲು ಹತ್ತಿದ. ಅಲ್ಲೂ ಅಪ್ಪನಿಗೆ ಜಯವಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 