ಜು.29ರಂದು ಒಳಪಂಗಡಗಳ ಸಮ್ಮಿಲನ ಸಮಾರಂಭ
ಲೋಕದರ್ಶನವರದಿ
ಹಾವೇರಿ: ಅಖಿಲ ಭಾರತ ತೈಲಿಕ ಸಾಹು(ಗಾಣಿಗ) ಮಹಾಸಭಾ ದೆಹಲಿ, ಯುವ ಘಟಕ ಕನರ್ಾಟಕ ಇವರ ಆಶ್ರಯ ಹಾಗೂ ಅಖಿಲ ಭಾರತ ಗಾಣಿಗ ಸಂಘ ಹುಬ್ಬಳ್ಳಿ, ತಾಲೂಕು ಘಟಕ ಧಾರವಾಡ ಇವರ ಸಹಯೋಗದಲ್ಲಿ ಗಾಣಿಗರ ಏಕತೆ ರಾಜ್ಯ ಸಮಾವೇಶ ಹಾಗೂ ಅಖಂಡ ಕನರ್ಾಟಕದ ಗಾಣಿಗರ ಎಲ್ಲಾ ಒಳಪಂಗಡಗಳ ಸಮ್ಮಿಲನ ಸಮಾರಂಭ ಜು. 29ರಂದು ಬೆಳಗ್ಗೆ 9ಕ್ಕೆ ಧಾರವಾಡದ ಮುದಕೇಶ್ವರ ವಡ್ಡಿನ ಕಲ್ಯಾಣ ಮಂಟಪ, ಗಿರಿನಗರ, ಕಲಘಟಗಿ ರಸ್ತೆ(ನುಗ್ಗಿಕೇರಿ ಹನುಮಂತ ದೇವರ ಮಂದಿರದ ಹತ್ತಿರ) ದಿ. ಸಿದ್ದು ನ್ಯಾಮಗೌಡರ ಮಹಾವೇದಿಕೆಯಲ್ಲಿ ಜರುಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಪ್ರಹ್ಲಾದ್ ದಾಮೋದರದಾಸ್ ಮೋದಿಯವರು ಸಮಾರಂಭಕ್ಕೆ ಚಾಲನೆ ನೀಡುವರು. ಕುಳ್ಳೂರ ಶಿವಯೋಗೀಶ್ವರ ಸಂಸ್ಥಾನ ಕಲ್ಮಠದ ಬಸವಾನಂದ ಭಾರತಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು.
ದೇಶದ 10ರಾಜ್ಯಗಳಿಂದ ಗಾಣಿಗ ಸಮಾಜದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ರಾಜ್ಯ ಗಾಣಿಗ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಮಾಜದ ಎಲ್ಲ ಬಾಂಧವರು ಸೇರಿ 25ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ. ಗಾಣಿಗ ಸಮಾಜದಲ್ಲಿರುವ ಎಲ್ಲ ಒಳಪಂಗಡಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ.
ಅಲ್ಲದೇ ಗಾಣಿಗ ಸಮಾಜದವರಿಗೆ 2ಎ ಮೀಸಲಾತಿ ಕಲ್ಪಿಸುವಂತೆ ರಾಜ್ಯ ಹಾಗೂ ಕೇಂದ್ರ ಸಕರ್ಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ. ಜಿಲ್ಲೆಯಿಂದ ಗಾಣಿಗ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಅಖಿಲ ಭಾರತ ಗಾಣಿಗ ಸಂಘದ ಜಿಲ್ಲಾಘಟಕದ ಅಧ್ಯಕ್ಷ ರಾಜೇಂದ್ರ ಸಜ್ಜನರ ತಿಳಿಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 