ಪಟೇಲ್ ರಿಂದ ಭುವನೇಶ್ವರಿ ವೃತ್ತದ ಉದ್ಘಾಟನೆ
Patel inaugurates Bhuvaneshwari Circle
ಪಟೇಲ್ ರಿಂದ ಭುವನೇಶ್ವರಿ ವೃತ್ತದ ಉದ್ಘಾಟನೆ
ಕೊಪ್ಪಳ 02: ನಗರದ ಮೂರನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಹಮಾಲರ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಭುವನೇಶ್ವರಿ ವೃತ್ತದ ಉದ್ಘಾಟನೆ ಯನ್ನು ಶನಿವಾರದಂದು ಕರ್ನಾಟಕ ರಾಜ್ಯೋತ್ಸವದ ದಿನಾಚರಣೆ ದಿನದಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಉದ್ಘಾಟನೆ ನೆರವೇರಿಸಿ ಲೋಕಾರೆ್ಣ ಮಾಡಿದರು,ನಂತರ ಸರಳ ಸಾಂಕೇತಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಯಿ ಭುವನೇಶ್ವರಿ ನಮ್ಮೆಲ್ಲರನ್ನು ಕಾಪಾಡಲಿ, ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸುವಂತೆ ಆಶೀರ್ವದಿಸಲಿ, ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆ ಕನ್ನಡ ಮಾತನಾಡಲಿ ,ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವಂತಾಗಲಿ, ಎಲ್ಲರೂ ಸೇರಿ ಕನ್ನಡಾಂಬೆ ತಾಯಿಯ ಹೆಮ್ಮೆಯ ಪುತ್ರರಂತೆ ಕನ್ನಡ ಭಾಷೆ ,ನಮ್ಮ ನಾಡಿನ ನೆಲ, ಜಲ ,ಇಲ್ಲಿಯ ಪರಂಪರೆ, ನಮ್ಮ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗುವದರ ಜೊತೆಗೆ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸಮಗ್ರ ಮಾಹಿತಿ ಮತ್ತು ಪರಿಚಯಿಸುವಂಥ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು, ಈ ಸಂದರ್ಭದಲ್ಲಿ ಹಮಾಲರ ಕಾಲೋನಿಯ ಹಿರಿಯ ಸಾರ್ವಜನಿಕರು, ಸಮಾಜ ಬಾಂಧವರು, ಯುವ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 