‘ಏಕತಾ ನಡಿಗೆ’ಯಲ್ಲಿ ಮೊಳಗಿದ ದೇಶಭಕ್ತಿ
Patriotism resounded in the 'Unity Walk'
ಯಲಬುರ್ಗಾ 31 : ‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶದ ಎಲ್ಲ ಸಂಸ್ಥಾನಗಳನ್ನು ಒಗ್ಗೂಡಿಸಿದರು. ದೇಶದ ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆಗಾಗಿ ಶ್ರಮಿಸಿದ ಮಹನೀಯ’ ಎಂದು ಪಿಎಸ್ಐ ಎಸ್ ಪಿ ನಾಯ್ಕ ಬಣ್ಣಿಸಿದರು. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತ್ಯುತ್ಸವ ಅಂಗವಾಗಿ ತಾಲೂಕಿನ ಬೇವೂರು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದಂದು ಏರಿ್ಡಸಿದ್ದ ರಾಷ್ಟ್ರೀಯ ಏಕತಾ ದಿನ ಅಂಗವಾಗಿ ಏಕತಾ ನಡಿಗೆಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಅವರು ಮಾತನಾಡಿದರು.
ಏಕತಾ ದಿನವು ಪೊಲೀಸ್ ಇಲಾಖೆಗೆ ಮಹತ್ವದ ದಿನ. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕಾರ್ಯಸಾಧನೆಗಳು ನಮಗೆಲ್ಲರಿಗೂ ಸ್ಫೂರ್ತಿಯಾಗಿವೆ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಲು ಈ ಏಕತಾ ದಿನ ಆಚರಣೆ ಪ್ರೇರಣೆಯಾಗಿದೆ ಎಂದರು. ಈ ಕಾರ್ಯಕ್ರಮ ವಿಶೇಷವಾಗಿ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಏಕತಾ ನಡಿಗೆ ಕಾರ್ಯಕ್ರಮ ಹಾಗೂ 1000 ಮೀಟರ್ ಮೆರಾಥನ್ ಕಾರ್ಯಕ್ರಮ ಆಯೋಜಿಸಲಾಗಿತ್ತು ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಪೊಲೀಸ್ ಸಿಬ್ಬಂದಿ ಮಂಜುನಾಥ್, ಶಂಕ್ರಯ್ಯ, ಬಸವರಾಜ್, ರವಿ ರಾಠೋಡ್, ಜಗದೀಶ್, ಬಾಲಪ್ಪ, ಗವಿಸಿದ್ದಯ್ಯ, ಶರಣಪ್ಪ ಹನುಮಂತ್ ಬಸವರಾಜ್ ಹಾಜರಿದ್ದರು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವೈದ್ಯಕೀಯ ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 