ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಣೆ ಮಾಡಿದ ಗಸ್ತು ವನಪಾಲಕ ಮುತ್ತುರಾಜ್ ಹಳ್ಳಿ
Patrol forest ranger Muthuraj Halli saved the day with a timely operation
ಮುಂಡಗೋಡ 17: ತಾಲೂಕಿನ ರಾಮಾಪುರ ಗ್ರಾಮದ ಬಸವರಾಜ ಈಳಿಗೇರ್ ಅವರ ಮನೆಯ ಸಮೀಪ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಹೆಬ್ಬಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದ ತಕ್ಷಣ ಉರಗ ತಜ್ಞ ಹಾಗೂ ಗಸ್ತು ವನಪಾಲಕರಾದ (ಬೀಟ್ ಫಾರೆಸ್ಟರ್) ಮುತ್ತುರಾಜ್ ಹಳ್ಳಿ ಅವರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮುತ್ತುರಾಜ್ ಹಳ್ಳಿ ಅವರು ಯಾವುದೇ ಅಪಾಯ ಸಂಭವಿಸದಂತೆ ಅತ್ಯಂತ ಎಚ್ಚರಿಕೆಯಿಂದ ಹೆಬ್ಬಾವನ್ನು ಹಿಡಿದು ರಕ್ಷಿಸಿದರು. ನಂತರ ಸಾರ್ವಜನಿಕರಲ್ಲಿ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿ, ಹಿಡಿದ ಹೆಬ್ಬಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಅವರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ.
ಈ ಕಾರ್ಯಾಚರಣೆಯಲ್ಲಿ ಪ್ರಕಾಶ ಈಳಿಗೇರ್, ಸುರೇಶ ಈಳಿಗೇರ್, ಪರಶುರಾಮ ಈಳಿಗೇರ್, ಹನುಮಂತ ಕಾರ್ಗಿ, ಮಹೇಶ ಅಕ್ಕಿಹೊಳಿ, ನಾಗರಾಜ ವಡ್ಡರ ಸೇರಿದಂತೆ ಇತರರು ಸಹಕಾರ ನೀಡಿದರು. ವನ ಇಲಾಖೆಯ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 