ಕೊರೊನಾ ನಿಯಂತ್ರಣಕ್ಕೆ 2 ಕೋಟಿ ರೂ ನೆರವಿನ ಹಸ್ತ ನೀಡಿದ ಪವನ್ ಕಲ್ಯಾಣ
ಬೆಂಗಳೂರು, ಮಾ.26, ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಕೈಜೋಡಿಸಿದ್ದು, ಹಣಕಾಸಿನ ನೆರವಿನ ಹಸ್ತ ನೀಡಲು ಮುಂದೆ ಬಂದಿದ್ದಾರೆ.ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪವನ್ ಕಲ್ಯಾಣ್ ತಿಳಿಸಿದ್ದಾರೆ.ಅಲ್ಲದೇ, ಇದರ ಜೊತೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡುವುದಾಗಿ ಅವರು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಲು ನಾನು ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಲಿದ್ದೇನೆ. ಅವರ ಅದ್ವಿತೀಯ ಹಾಗೂ ಸ್ಫೂರ್ತಿದಾಯಕ ನಾಯಕತ್ವದಿಂದ, ಖಂಡಿತ ನಮ್ಮ ದೇಶ ಕೊರೊನಾ ಸೋಂಕನ್ನು ಮೆಟ್ಟಿ ನಿಲ್ಲುತ್ತದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 