ಸಕ್ಕರೆ ಕಾರ್ಖಾನೆಯ ನಿರ್ಧೆಶಕರಾಗಿ ಪವಾರ್ ಆಯ್ಕೆ
ಲೋಕದರ್ಶನ ವರದಿ
ಮಾಂಜರಿ 29: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿ ಪ್ರದೇಶದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಿರುವ ನೆರೆಯ ಮಹಾರಾಷ್ಟ್ರ ರಾಜ್ಯದ ಶಿರೊಳ ತಾಲ್ಲೂಕಿನ ಸೈನಿಕ್ ಟಾಕಳಿ ಗ್ರಾಮದ ಗುರುದತ್ತ ಶುಗರ್ಸ ಸಕ್ಕರೆ ಕಾರ್ಖಾನೆಯ ನಿರ್ಧೆಶಕರಾಗಿ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಣ್ಣಾ ಸಾಹೇಬ್ ಅಪ್ಪಾಸಾಬ್ ಪವಾರ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಾಧವರಾವ್ ಘಾಟಗೆ ತಿಳಿಸಿದರು
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿ ಭಾಗದಲ್ಲಿರುವ ಗುರುದತ್ತ ಶುಗರ್ಸ ಸಕ್ಕರೆ ಕಾರ್ಖಾನೆ ಖಾಸಗಿ ಒಡೆತನದ ಸಕ್ಕರೆ ಕಾರ್ಖಾನೆಯ ಹಲವಾರು ಸಮಾಜ ಕಾರ್ಯ ಮತ್ತು ಕಬ್ಬು ಬೆಳೆಗಾರರಿಗೆ ಅನುಕೂಲವಾಗುವ ಎಲ್ಲಾ ಮಾದರಿ ಯೋಜನೆಗಳನ್ನು ರೂಪಿಸಿಕೊಂಡು ದೇಶದಲ್ಲಿ ಒಂದು ಮಾದರಿ ಸಕ್ಕರೆ ಕಾರ್ಖಾನೆ ಆಗಿದ್ದು ಈ ಸಕ್ಕರೆ ಕಾರ್ಖಾನೆಯ ಕಳೆದ ಹದಿನೈದು ವರ್ಷಗಳಿಂದ ಕಬ್ಬಿಗೆ ಎಲ್ಲ ಸಕ್ಕರೆ ಕಾರ್ಖಾನೆ ಗಿಂತ ಹೆಚ್ಚಿನ ಬೆಲೆ ನೀಡಲಾಗಿದೆ ಈ ವರ್ಷ ಕೂಡ ಎಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗುವುದೆಂದು ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಾಧವರಾವ್ ಘಾಟಗೆ ತಿಳಿಸಿದರು.
ಈ ವೇಳೆ ನೂತನವಾಗಿ ನಿರ್ಧೆಶಕರಾಗಿ ಆಯ್ಕೆಯಾಗಿರುವ ಅಣ್ಣಾಸಾಬ ಪವಾರ್ ಇವರನ್ನು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಾಧವರಾವ್ ಘಾಟಗೆ ಸನ್ಮಾನಿಸಿದರು ಈ ವೇಳೆ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ಧೆಶಕ ರಾಹುಲ್ ಘಾಟಿಗೆ ನಿರ್ಧೆಶಕರಾದ ಸಂಜಯ್ ಗಾಯಕ್ವಾಡ್ ಧೋಂಡಿರಾಮ ನಾಗನೇ ಬಾಳಾಸಾಹೆಬ ಪಾಟೀಲ್ ಹಾಗೂ ಇನ್ನಿತರ ರೈತರು ಹಾಜರಿದ್ದರೂ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 