ಮೋದಿ ವಿರುದ್ಧ ಗುಡುಗಿದ ಎನ್ಸಿಪಿ ನಾಯಕ ಪವಾರ್
ಮುಂಬೈ ಅ 9: ಪ್ರದಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ಎನ್ ಸಿ ಪಿ ನಾಯಕ, ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಮತ್ತೆ ಗುಡುಗಿದ್ದಾರೆ.
ಪಾಕಿಸ್ತಾನದ ಪರವಾಗಿದ್ದರೆ, ನೀವು (ಕೇಂದ್ರ ಸರಕಾರ) ನನಗೆ ಪದ್ಮವಿಭೂಷಣ ಕೊಟ್ಟಿದ್ದು ಏಕೆ ? ಎಂದು ನೇರ ಪ್ರಶ್ನೆ ಮಾಡಿದ್ದಾರೆ.
ಪಾಕಿಸ್ತಾನದಲ್ಲಿ ಉತ್ತಮ ಆತಿಥ್ಯ ಸತ್ಕಾರ ದೊರಕಿದೆ. ಕೇಂದ್ರ ಸರಕಾರ ಹೇಳುವ ಹಾಗೆ ಅಲ್ಲಿ ಕೆಟ್ಟ ಪರಿಸ್ಥಿತಿ ಇಲ್ಲ ಎಂದು ಇತ್ತೀಚೆಗೆ ಶರದ್ ಪವಾರ್ ಹೇಳಿಕೆ ನೀಡಿದ್ದರು. ಕೆಲ ದಿನಗಳ ಹಿಂದೆ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸಹ ವಿಷಯವನ್ನು ಮುಂದಿಟ್ಟುಕೊಂಡು ಪವಾರ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಇದು ವಾದ- ವಿವಾದಕ್ಕೆ ಕಾರಣವಾಗಿತ್ತು. ಈಗ ಇದೇ ಚುನಾವಣಾ ವಿಷಯವಾಗುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಶರದ್ ಪವಾರ್, ಪ್ರಧಾನ ಮಂತ್ರಿಯವರಿಗೆ ಖಚಿತ ಮಾಹಿತಿ ಕೊಡುವವರು ಇದ್ದಾರೆ ಎಂದು ನಂಬಿದ್ದೆ. ಆದರೆ ನಾನು ಏನು ಹೇಳಿದ್ದೆ ಎಂದು ಅವರಿಗೆ ಖಚಿತವಾಗಿ ಯಾರೂ ಹೇಳಿಲ್ಲ ಎಂಬುದು ಗೊತ್ತಾಗುತ್ತಿದೆ ಎಂದು ತಿರುಗೇಟು ನೀಡಿ, ಪಾಕ್ ಪರವಾಗಿ ಇದ್ದರೆ, ಅವರು ಏಕೆ ನನಗೆ ಪದ್ಮ ಪ್ರಶಸ್ತಿ ನೀಡಿದ್ದು ಎಂದು ಪ್ರಶ್ನೆ ಮಾಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 