ಕಾರ್ಮಿಕರಿಗೆ ನಿರಂತರ ಕೂಲಿ ನೀಡಿ : ಇಒ ಯಶಂತಕುಮಾರ
Pay wages to workers regularly: EO Yashanthakumar
ಲೋಕದರ್ಶನ ವರದಿ
ಬೆಳಗಾವಿ, 07 : ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದು, ನರೇಗಾ ಗುರಿಗೆ ಅನುಗುಣವಾಗಿ ಪ್ರತಿ ಗ್ರಾಮ ಪಂಚಾಯತಿವಾರು ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ನೀಡಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶಂತಕುಮಾರ ಅವರು ಸೂಚಿಸಿದರು.
ಸ್ಥಳೀಯ ತಾಲ್ಲೂಕ ಪಂಚಾಯತ ಸಭಾಭವನದಲ್ಲಿ ಏಪ್ರಿಲ್ 7ರಂದು (ಮಂಗಳವಾರ) ವಿವಿಧ ವಿಷಯಗಳ ಪ್ರಗತಿ ಪರೀಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪಿಡಿಒ ಅವರು ತಮ್ಮ ಗ್ರಾಮ ಪಂಚಾಯತಿ ಕ್ರೀಯಾಶೀಲ ಕೂಲಿ ಕಾರ್ಮಿಕರಿಗೆ ಒಂದು ವರ್ಷದ ಆರ್ಥಿಕ ವರ್ಷಕ್ಕೆ ಬೇಕಾಗುವ ಕೂಲಿಗೆ ಅನುಗುಣವಾಗಿ ನರೇಗಾ ಕೂಲಿ ಕಾರ್ಮಿಕರಿಗೆ ನಿರಂತರ ಕೆಲಸ ನೀಡಬೇಕು ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು ಎಂದು ತಿಳಿಸಿದರು.
ತಮ್ಮ ಗ್ರಾಮ ಪಂಚಾಯತಿ ಕೆಲಸದ ಜೊತೆಗೆ ಶಾಲೆ ಹಾಗೂ ಅಂಗನವಾಡಿ ಸೇರಿದಂತೆ ಇತರ ಇಲಾಖೆಯ ಕಚೇರಿಗೆ ಸಂಬಂಧಿಸಿದಂತೆ ಪ್ರತಿ ದಿನ ಮಾಹಿತಿ ಇರಬೇಕು. ಇ-ಕೆವೈಸಿ ಪ್ರಗತಿಯಾಗಬೇಕು. ಕರ ವಸೂಲಾತಿಗೆ ಸಂಬಂಧಿಸಿದಂತೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೋಟಲ್ ಮತ್ತು ಇತರೆ ಕಟ್ಟಡಗಳಿಗೆ ಕರವಸುಲಾತಿಯಾಗಬೇಕು ಎಂದು ಸೂಚಿಸಿದರು.
ಇದೆ ವೇಳೆ, ಜಿಲ್ಲಾ ಪಂಚಾಯಿತಿಗೆ ಬಡ್ತಿಹೊಂದಿ ವರ್ಗಾವಣೆಗೊಂಡ ಸಹಾಯಕ ಲೆಕ್ಕಾಧಿಕಾರಿ ಬಸವರಾಜ ಪಾಟೀಲ ಅವರಿಗೆ ಸನ್ಮಾನಿಸಲಾಯಿತು. ಸಹಾಯಕ ಲೆಕ್ಕಧಿಕಾರಿಗಳಾಗಿ ಹೊಸದಾಗಿ ಆಗಮಿಸಿದ ಜಗದೀಶ ಚಿನಿವಾರ ಅವರಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಹಾಯಕ ನಿರ್ದೇಶಕರಾದ ಬಿ.ಡಿ ಕಡೇಮನಿ, ತಾಲ್ಲೂಕಾ ಯೋಜನಾಧಿಕಾರಿಗಳಾದ ಎನ್. ಎಸ್. ಹೂಗಾರ, ತಾಪಂ ವ್ಯವಸ್ಥಾಪಕರಾದ ಶ್ರೀಮತಿ ಮಾಹಾಂತಮ್ಮ ಎಂ. ದಂಡೋತಿ ಸೇರಿದಂತೆ ವಿವಿಧ ವಿಷಯಗಳ ವಿಷಯ ನಿರ್ವಾಹಕರು, ಗ್ರಾಪಂ ಪಿಡಿಒ, ತಾಪಂ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 