ಪ್ರಾಮಾಣಿಕ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ, ಸ್ಥಿರತೆ: ರಾಜನಾಥ್ ಸಿಂಗ್
ರಾಜನಾಥಸಿಂಗ್
ಲೋಕದರ್ಶನ ವರದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಪ್ರಾಮಾಣಿಕ, ಪರಿಣಾಮಕಾರಿ ಮತ್ತು ದಕ್ಷ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ತರುವುದಾಗಿ ಗುರುವಾರ ಹೇಳಿದ್ದಾರೆ.
ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ್ದ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿದ ನಂತರವೇ ಕಾಶ್ಮೀರಿ ಜನತೆಗೆ ಅಭಿವೃದ್ಧಿಯ ಕನಸು ನನಸಾಗಲಿದೆ ಎಂದರು.
ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕೇಂದ್ರ ಸಕರ್ಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದರು.
ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ನಂತರ ಜೂನ್ 20ರಂದು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 