ಮೊಹರಂ ಹಬ್ಬದ ನಿಮಿತ್ತ ಶಾಂತಿ ಸಭೆ
Peace meeting on the occasion of Muharram festival
ಯಲಬುರ್ಗಾ 28: ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು’ ಎಂದು ಕಮಲನಗರ ಠಾಣೆ ವೃತ್ತ ನೀರೀಕ್ಷಕ ಮೌನೇಶ್ವರ ಮಾಲಿಪಾಟೀಲ್ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದಲ್ಲಿ ಹಬ್ಬಗಳು ಭಾವೈಕ್ಯತೆಯ ಸಂಕೇತವಾಗಿವೆ. ಎಲ್ಲರೂ ಸೇರಿ ಸಮಸ್ಯೆಯಾಗದಂತೆ ಹಬ್ಬ ಆಚರಿಸಬೇಕು’ ಎಂದರು. ನಂತರ ಪಿಎಸ್ಐ ವಿಜಯ ಪ್ರತಾಪ ಅವರು ಮಾತನಾಡಿ , ಪ್ರತಿವರ್ಷದಂತೆ ಈ ವರ್ಷವೂ ಸಹ ಮೊಹರಂ ಹಬ್ಬವನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಶಾಂತರೀತಿಯಲ್ಲಿ ಮೊಹರಂ ಆಚರಣೆ ಮಾಡುವಂತೆ ಜನತೆಗೆ ತಿಳಿಸಿದರು.
ಈ ವೇಳೆ ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಅಂದಾನಗೌಡ ಉಳ್ಳಾಗಡ್ಡಿ ,ಅತ್ತಾರಸಾಬ್ ಖಾಜಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಮೊಹರಂ ಹಬ್ಬವನ್ನು ಪ್ರತಿ ವರ್ಷ ಎಲ್ಲ ಸಮುದಾಯದವರು ಒಗ್ಗೂಡಿ ಅತಿ ವಿಜೃಂಬಣೆಯಿಂದ ಆಚರಣೆ ಮಾಡುತ್ತಾ ಬಂದಿದ್ದು ಈ ವರ್ಷವೂ ಕೂಡ ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ನೀಡದೆ ಶಾಂತ ರೀತಿಯಲ್ಲಿ ಅಚ್ಚು ಕಟ್ಟಾಗಿ ಹಬ್ಬ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಿಎಸ್ಐ ಗುಲಾಮ ಅಹ್ಮದ್ ಖಾಜಿ, ಪಪಂ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯ ಅಶೋಕ ಅರಕೇರಿ, ಹನುಮಂತ ಭಜಂತ್ರಿ, ಮುಖಂಡರಾದ ಈರ್ಪ ಬಣಕಾರ,. ಎಮ್ ಎನ್ ನದಾಫ್, ಯಲ್ಲಪ್ಪ ನಾಯಕ್, ಶಿವಾನಂದ ಬಣಕಾರ, ಮಲ್ಲಪ್ಪ ಹನಿಗಿ, ಸೇರಿ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 