ತಿರುಮಲ ವೆಂಕಟೇಶ್ವರನ ದರ್ಶನ ಪಡೆದ ಪೇಜಾವರ ಶ್ರೀ
ತಿರುಮಲ, ಡಿ 17: ಉಡುಪಿಯ ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಮಂಗಳವಾರ ಇಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಾನ್ ವೆಂಕಟೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.ವೇದ ಮಂತ್ರಗಳ ಪಠಣದೊಂದಿಗೆ ಸ್ವಾಮೀಜಿಯವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಅವರು ಪೇಜಾವರ ಮಠದ 32ನೇ ಸ್ವಾಮೀಜಿಯವರನ್ನು ಸ್ವಾಗತಿಸಿದರು.ದೇವಾಲಯದ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದ್ರನಾಥ್, ಟಿಟಿಡಿ ಮಂಡಳಿ ಸದಸ್ಯ ಡಿ.ಪಿ. ಅನಂತ ಮತ್ತು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 