ಚಾಂದಕವಟೆ ಗ್ರಾಮದಲ್ಲಿ ಪಿಂಚಣಿ ಅದಾಲತ್
Pension Adalat in Chandakavate village
ಸಿಂದಗಿ 08: ಬಡವರಿಗೆ ಸರಕಾರಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ತೆಗೆದುಕೊಳ್ಳುತ್ತದೆ. ಕಾರಣ ಗ್ರಾಮಸ್ಥರು ಸರಕಾರ ಸೌಲಭ್ಯಗಳನ್ನು ಅಗತ್ಯ ದಾಖಲೆಗಳನ್ನು ನೀಡಿ ನೊಂದಣಿಗೆ ಸಹಕಾರ ನೀಡಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಕರೆ ನೀಡಿದರು.
ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿಂದಗಿ ಉಪ ತಹಶಿಲ್ದಾರ ಇಂದಿರಾಬಾಯಿ ಬಳಗಾನೂರ, ಕಂದಾಯ ನೀರೀಕ್ಷಕ ಐ.ಎಂ. ಮಕಾಂದರ್, ಗ್ರಾಮ ಲೆಕ್ಕಾಧಿಕಾರಿ ಪಿ.ಕೆ.ಹುಡೆದ್ ಗ್ರಾಮದ . ಪರಮಾನಂದ ಕಂಟಿಗೊಂಡ . ಸದಾನಂದ. ಹಿರೇಮಠ. ದೀನೆಶ ಸಿಂದಗಿ. ಸಿದ್ದನಗೌಡ ಪಾಟಿಲ್, ಸುಭಾಸ್ ಶಿರಕನಳ್ಳಿ, ಮಡ್ಡಪ್ಪ ಸೊನ್ನದ್, ಚಾಂದಸಾಬ್ ಮುಲ್ಲಾ, ಶೇಖರ ಕಲ್ಲೂರ. ಪತ್ರಕರ್ತ ನಿಂಗರಾಜ ಅತನೂರ ಇದ್ದರು.
ಗ್ರಾಮದ ಸ್ಮಶಾನದ ಜಾಗ 9 ಎಕರೆ 9 ಗುಂಟೆ ಗ್ರಾಮದ ಪ್ರಭಾವಿಗಳು ಕಬಳಿಸಿದ್ದು ಈ ಜಾಗ ಖಾಲಿ ಮಾಡಿಸಿ ಶವ ಸಂಸ್ಕಾರಕ್ಕೆ ಅನುಕೂಲ ಮಾಡಿ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಇಂಡಿ ಉಪ ವಿಬಾಗಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 