ಮೇ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜನರ ಹೋರಾಟ
People's protest at Freedom Park in Bengaluru on May 14th
ಗಂಗಾವತಿ 11: ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಧ್ಯೆ ಮೇ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಜನ ಹೋರಾಟದ ವಿಚಾರಗಳನ್ನು ಪ್ರಚಾರ ಮಾಡಲಾಯಿತು.
ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಮುಖಂಡರದ ಶರಣು ಪಾಟೀಲ್ ಮಾತನಾಡಿ ಗ್ರಾಮೀಣ ಉದ್ಯೋಗ ರಾತ್ರಿಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮೀಣ ಕೃಷಿ ಕೂಲಿಕಾರಗೆ ಕೂಲಿಯನ್ನು ರೂ. 600 ಕ್ಕೆ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಲು ದಿನಾಂಕ 14 ರಂದು ಬೃಹತ್ ಹೋರಾಟವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯು ಹಲವಾರು ಜನ ಕುಟುಂಬಕ್ಕೆ ಆಸರೆಯಾಗಿದೆ. ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಉದ್ಯೋಗ ಖಾತ್ರಿ 370 ರು ನಿಗದಿಯಾಗಿದ್ದರು ಜೀವನ ನಡೆಸಲು ಸಾಕಾಗುತ್ತಿಲ್ಲ. ಸರ್ಕಾರ ಕೂಡಲೇ ಕೂಲಿಯನ್ನು 600 ಕ್ಕೆ ಹೆಚ್ಚಿಸಬೇಕು. ಮತ್ತು ನೂರು ದಿನ ಮಾನವ ದಿನಗಳನ್ನು 200 ದಿನಕ್ಕೆ ಹೆಚ್ಚಿಸಬೇಕೆಂದು ಇದೇ ಮೇ 14 ರಂದು ಬೃಹತ್ ಹೋರಾಟವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಪ್ರತಿಯೊಬ್ಬರೂ ಕೂಡ ಬೆಂಬಲಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಮಿಕರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮೇಟ್ ಆಗಿರತಕ್ಕಂತ. ಸೋಮವ್ವ, ಗಂಗ್ಮಾಳವ, ಕಾರ್ಮಿಕರಾದ ನಾಗಪ್ಪ ತೋಟದ, ನಿಂಗಪ್ಪ, ಗ್ಯಾನಪ್ಪ, ನಾಗರಾಜ್, ಸೋಮಪ್ಪ, ಮಾರ್ತಪ್ಪ, ಹನುಮಪ್ಪ, ಶಿವಪ್ಪ, ಹನುಮವ್ವ, ಕರಿಯಪ್ಪ, ಈಶಪ್ಪ. ಮುಂತಾದವರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 