ಬೆಲೆ ಏರಿಕೆಯಿಂದ ಜನರು ಹೈರಾಣ, ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ: ರಾಹುಲ್ ಗಾಂಧಿ ಬೇಸರ
People are harassed by price hike, inevitable compromise on essentials: Rahul Gandhi fed up
ನವದೆಹಲಿ 24: ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಲ್ಲಿನ ಗಿರಿನಗರದ ತರಕಾರಿ ಮಾರುಕಟ್ಟೆಗೆ ಇತ್ತೀಚಿಗೆ ಭೇಟಿ ನೀಡಿ, ಗೃಹಿಣಿಯೊಂದಿಗೆ ಸಂವಾದ ನಡೆಸಿದ್ದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಸಾಮಾನ್ಯ ಜನರ ಬಜೆಟ್ ಹೇಗೆ ಕ್ಷೀಣಿಸುತ್ತಿದೆ ಮತ್ತು ಹಣದುಬ್ಬರ ಪ್ರತಿಯೊಬ್ಬರಿಗೂ ಸಮಸ್ಯೆಯಾಗಿದೆ ಎಂಬುದನ್ನು ತಿಳಿಯಲು ಮಾರಾಟಗಾರರೊಂದಿಗೆ ಮಾತನಾಡಿದ್ದಾಗಿ ಹೇಳಿದ್ದಾರೆ.
ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ದೈನಂದಿನ ಅಗತ್ಯಗಳ ಖರೀದಿಯಲ್ಲಿ ರಾಜಿ ಮಾಡಿಕೊಳ್ಳಬೇಕಾದ ಸಂದರ್ಭವಿದೆ ಎಂದು ಅವರು ಫೋಸ್ಟ್ ಮಾಡಿದ್ದಾರೆ.
‘ಬೆಳ್ಳುಳ್ಳಿ, ಅವರೆಕಾಳು, ಅಣಬೆ ಮತ್ತಿತರ ತರಕಾರಿಗಳ ಬೆಲೆಯನ್ನು ಚರ್ಚಿಸಿ ಜನರ ನೈಜ ಅನುಭವಗಳನ್ನು ಕೇಳಿ ತಿಳಿದುಕೊಂಡೆ. ಬೆಳ್ಳುಳ್ಳಿ ಕೆ.ಜಿಗೆ 400, ಅವರೆಕಾಳು ಕೆ.ಜಿಗೆ 120... ಹೀಗಾದರೆ ಜನ ತಿನ್ನುವುದೇನು? ಉಳಿಸುವುದೇನು?’ ಎಂದು ಕೇಳಿದ್ದಾರೆ.
‘ಒಂದು ಕಾಲದಲ್ಲಿ ಕೆ.ಜಿಗೆ ₹40 ಇದ್ದ ಬೆಳ್ಳುಳ್ಳಿ ಬೆಲೆ ಇಂದು ₹400 ಆಗಿದೆ... ಬೆಲೆ ಏರಿಕೆಯಿಂದ ಜನರು ಹೈರಾಣಾಗಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸುವುದರಲ್ಲಿಯೂ ರಾಜಿ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 